ಜ.27ರಂದು ಪೆರಾಜೆಯಲ್ಲಿ ಸಂಪಾಜೆ ಹೋಬಳಿ ಮಟ್ಟದ ಜನಸ್ಪಂದನಾ ಸಭೆ

0

ಪೆರಾಜೆಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ

ಸಂಪಾಜೆ ಹೋಬಳಿ ಮಟ್ಟದ ಜನಸ್ಪಂದನಾ ಸಭೆಯು ಜ.27ರಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ಅ.2 ಗಂಟೆಯಿ.ದ ನಡೆಯಲಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣರವರು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭ ಪೆರಾಜೆ – ಕುಂಬಳಚೇರಿ – ಕೂರ್ನಡ್ಕ ರಸ್ತೆ ಅಭಿವೃದ್ಧಿ ಗೆ ರೂ.4 ಕೋಟಿ ಮಂಜೂರುಗೊಂಡಿದ್ದು ಗುದ್ದಲಿಪೂಜೆ ನಡೆಯುವುದು. ಹಾಗೂ ಕೆ.ಪರಾಜೆಯಲ್ಲಿ ಜೆಜೆಎಂ ಕಾಮಗಾರಿ ಉದ್ಘಾಟನೆ ನಡೆಯಲಿದೆ ಎಂದು ತಿಳಿದುಬಂದಿದೆ.