ಜಯನಗರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

0

ಜಯನಗರ ಸ.ಉ.ಹಿ.ಪ್ರಾ ಶಾಲೆಯಲ್ಲಿ ೭೫ನೇ ವರ್ಷದ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸ್ಥಳೀಯ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮುದ್ದಪ್ಪ ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ ಮೈದಾನದಲ್ಲಿ ವಿದ್ಯಾರ್ಥಿಗಳಿಂದ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ದೇಶಭಕ್ತಿಗೀತೆಗೆ ಪುಟಾಣಿ ಮಕ್ಕಳು ಹೆಜ್ಜೆ ಇಟ್ಟು ಸಾಮೂಹಿಕ ನೃತ್ಯ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗನ್ನು ತಂದುಕೊಟ್ಟರು.

ವೇದಿಕೆಯಲ್ಲಿ ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಕೊಡಂಕೇರಿ, ನಿವೃತ್ತ ಪ್ರಭಾರ ಮುಖ್ಯೋಪಾಧ್ಯಾಯ ತೀರ್ಥರಾಮ ಅಡ್ಕಬಳೆ, ಶಾಲಾ ಮುಖ್ಯ ಶಿಕ್ಷಕಿ ವೀಣಾ ಕೆ., ಎಸ್.ಡಿ.ಎಂ.ಸಿ ಅಧ್ಯಕ್ಷ ಮುದ್ದಪ್ಪ, ಉಪಾಧ್ಯಕ್ಷೆ ನಳಿನಿ, ಸದಸ್ಯರುಗಳಾದ ಸುಂದರ ಕುದ್ಪಾಜೆ ಹಾಗೂ ಇತರ ಸದಸ್ಯರುಗಳು, ಪತ್ರಕರ್ತ ಹಸೈನಾರ್ ಜಯನಗರ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದರು. ಶಿಕ್ಷಕಿಯರಾದ ಮಮತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ನಳಿನಾಕ್ಷಿ ವಂದಿಸಿದರು.