ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಸಂಭ್ರಮ

0

ಹಸಿರುವಾಣಿ ಸಮರ್ಪಣೆ – ರಾತ್ರಿ ದೇವರ ಭೂತಬಲಿ ಉತ್ಸವ ಮತ್ತು ಕಟ್ಟೆಪೂಜೆ

ಮಾಜಿ ಸಚಿವ ಎಸ್. ಅಂಗಾರ ಸೇರಿದಂತೆ ಭಕ್ತಾದಿಗಳಿಂದ ತುಲಾಭಾರ ಸೇವೆ

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಕಾಲಾವಧಿ ಜಾತ್ರೋತ್ಸವವು ಜ.26ರಿಂದ ಪ್ರಾರಂಭಗೊಂಡಿದ್ದು, ಶ್ರೀ ದೇವರಿಗೆ ದೀಪೋತ್ಸವವು ನಡೆಯಿತು.


ಫೆ.27ರಂದು ಬೆಳಿಗ್ಗೆ ಗಣಪತಿ ಹವನ ನಡೆದು ಶ್ರೀ ದೇವರ ಹಸಿರುವಾಣಿ ಮೆರವಣಿಗೆಯು ಸುಳ್ಯ ನಗರದಲ್ಲಿ ಸಾಗಿ ಬಂದು ಉಗ್ರಾಣ ತುಂಬಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್. ಅಂಗಾರ ಸೇರಿದಂತೆ ಭಕ್ತಾದಿಗಳು ತುಲಾಭಾರ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಚಂದ್ರಕಾಂತ್, ಉತ್ಸವ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್, ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಸೇರಿದಂತೆ ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಹಾಗೂ ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಶ್ರೀ ದೇವರ ಭೂತಬಲಿ ಮತ್ತು ಕಟ್ಟೆಪೂಜೆ ಜರುಗಲಿದೆ.