ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ

0

ಮಾಲಕ ಸಯ್ಯದ್ ಬಶೀರ್ ಕಲ್ಲುಗುಂಡಿಯಲ್ಲಿ ಪೊಲೀಸ್ ವಶಕ್ಕೆ

ನಿನ್ನೆ ಬೆಳ್ತಂಡಿ ಸಮೀಪ ಪಟಾಕಿ ಗೋಡಾನ್‌ನಲ್ಲಿ ಪಟಾಕಿ ತಯಾರಿಕೆ ವೇಳೆ ಸ್ಪೋಟ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪಟಾಕಿ ತಯಾರಿಕಾ ಘಟಕದ ಮಾಲಕ ಸಯ್ಯದ್ ಬಶೀರ್‌ರವರು ಪರಾರಿಯಾಗುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಕಲ್ಲಗುಂಡಿ ಸಮೀಪ ಸುಳ್ಯ ಪೋಲಿಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ನೇತೃತ್ವದ ತಂಡ ಬಂಧಿಸಿ ಹೆಚ್ಚಿನ ವಿಚಾರಣೆಗೆ ವೇಣೂರು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.