ಎಣ್ಮೂರಿನಲ್ಲಿ ಫೆ.1 ರಿಂದ 7 ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶ‌ರ್ ಚಿಕಿತ್ಸಾ ಶಿಬಿರ

0

ಶ್ರೀ ಸೀತಾರಾಮಚಂದ್ರ ಸೇವಾ ಪ್ರತಿಷ್ಠಾನ ಎಣ್ಮೂರು, ಮುರುಳ್ಯ- ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಶ್ರೀ ಗುರುಕೃಪಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಇವುಗಳ ಸಹಕಾರದಲ್ಲಿ ಫೆ .1ರಿಂದ ಫೆ.7ರವರೆಗೆ ಏಳು ದಿನಗಳ ಸುಜೋಕ್ ಮತ್ತು ಅಕ್ಯುಪ್ರೆಶ‌ರ್ ಚಿಕಿತ್ಸಾ ಶಿಬಿರ ಎಣ್ಮೂರಿನ ಶ್ರೀ ಸೀತಾರಾಮಾಂಜನೇಯ ಭಾರತಿ ಮಂದಿರದಲ್ಲಿ ನಡೆಯಲಿದೆ.

ಶಿವಮೊಗ್ಗದ ಚಂದನ್ ಜಿ. ಮತ್ತು ಮಂಜುನಾಥ್‌ ಎನ್.ರವರು ಚಿಕಿತ್ಸೆ ನೀಡಲಿದ್ದಾರೆ. ಮೊಣಕಾಲು ನೋವು, ಸೊಂಟ ನೋವು, ಬೆನ್ನು ನೋವು, ಕೈಕಾಲು ಸೆಳೆತ, ಮಲಬದ್ಧತೆ, ಸಕ್ಕರೆ ಕಾಯಿಲೆ, ಗ್ಯಾಸ್ಟ್ರಿಕ್, ಕೊಲೆಸ್ಟ್ರಾಲ್‌, ದೇಹದ ಅತಿಭಾರ, ಸ್ತ್ರೀಯರ ಸಮಸ್ಯೆಗಳು, ಜೀರ್ಣ ಸಮಸ್ಯೆ, ರಕ್ತದೊತ್ತಡ ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಿದ್ದಾರೆ.