ಸುಳ್ಯ ರೈತ ಉತ್ಪಾದಕ ಕಂಪೆನಿಯ ಕಾರ್ಯಕಾರಿ ಸಮಿತಿಯ ಸಭೆ

0

ಸುಳ್ಯ ರೈತ ಉತ್ಪಾದಕ ಕಂಪೆನಿ ನಿಯಮಿತ ಇದರ ಕಾರ್ಯಕಾರಿ ಸಮಿತಿಯ ಸಭೆಯನ್ನು ಜ. ೩೦ರಂದು ಎ ಪಿ ಎಂ ಸಿ ಸುಳ್ಯದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಸಂಸ್ಥೆಯ ಪ್ರಗತಿಯ ಕುರಿತು, ಮುಂದಿನ ಕಾರ್ಯ ಯೋಜನೆಗಳ ಕುರಿತು ಚರ್ಚಿಸಲಾಯಿತು ಮತ್ತು ಐವರ್ನಾಡು ಭಾಗದ ನೂಜಾಲು ಪದ್ಮನಾಭ ಗೌಡರವರು ತಮ್ಮ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಹೊಸ ನಿರ್ದೇಶಕರಾಗಿ ಧರ್ಮಪಾಲರನ್ನು ಆಯ್ಕೆ ಮಾಡಲಾಯಿತು.
ಸಭಾಧ್ಯಕ್ಷತೆಯನ್ನು ಸುಳ್ಯ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಎ.ಐ.ಸಿ ನಿಟ್ಟೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಪಿ ಆಚಾರ್ ಹಾಗೂ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಗುರುಪ್ರಸಾದ್ ಭಾಗವಹಿಸಿದರು.
ಸಂಸ್ಥೆಯ ನಿರ್ದೇಶಕರು, ಕಾರ್ಯಕಾರಿ ಸಮಿತಿಯ ಸದಸ್ಯರು , ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಹರೀಶ್ ಕೆ. ಇದ್ದರು.

ಸುರೇಶ್ ರೈ ಬಾಳಿಲ (ನಿರ್ದೇಶಕರು ಸುಳ್ಯ ರೈತ ಉತ್ಪಾದಕ ಕಂಪನಿ) ಪ್ರಾರ್ಥನೆಯನ್ನು ಮಾಡಿದರು. ಹಾಗೂ ಸುಳ್ಯ ರೈತ ಉತ್ಪಾದಕ ಕಂಪನಿ ನಿರ್ದೇಶಕ ಜಯರಾಮ ಮುಂಡೂಳಿ ಮೂಲೆ ಸ್ವಾಗತಿಸಿ, ಸುಳ್ಯ ರೈತ ಉತ್ಪಾದಕ ಕಂಪನಿ ನಿರ್ದೇಶಕ ಶ್ರೀಶ ಕುಮಾರ್ ಎಂ ಎಸ್ ವಂದಿಸಿದರು.