ಪಂಜ ಸೀಮೆ ದೇವಳದಲ್ಲಿ ವರ್ಷಾವಧಿ ಜಾತ್ರೋತ್ಸವ- ಬಂಟಮಲೆಯಿಂದ ತೀರ್ಥ

0

⬆️ ಇಂದು ರಾತ್ರಿ ಭರತನಾಟ್ಯ ಪ್ರದರ್ಶನ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಜ.24 ರಿಂದ ಫೆ.9 ರ ತನಕ ನಡೆಯಲಿದೆ.

ಫೆ.2 ರಂದು ಮುಂಜಾನೆ ಬಂಟಮಲೆಯ ತೀರ್ಥದ ಸ್ಥಳದಲ್ಲಿ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತರಲಾಯಿತು. ಉತ್ಸವ, ಮಹಾಪೂಜೆ ಜರುಗಲಿದೆ.ದೇವಳದ ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಉತ್ಸವ ಸಮಿತಿಯ ಸದಸ್ಯರು , ಸೀಮೆಯ‌ ಭಕ್ತಾದಿಗಳು ಪಾಲ್ಗೊಂಡಿದ್ದರು.

ಇಂದು ರಾತ್ರಿ ಗಂಟೆ 7 ರಿಂದ ಪ್ರಣತಿ ಚೈತನ್ಯ ಪದ್ಯಾನ ಮತ್ತು ಪದಯಾನ ತಂಡದವರಿಂದ ಭರತನಾಟ್ಯ ಪ್ರದರ್ಶನ ಗೊಳ್ಳಲಿದೆ
ಫೆ.1 ರಂದು ಸಂಜೆ ತಂತ್ರಿ ಆಗಮನ, ಧ್ವಜಾರೋಹಣ ನಡೆದು ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಫೆ.3.ರಂದು ಮಹಾಪೂಜೆ , ನಿತ್ಯಬಲಿ ಸಂಜೆ ಹಸಿರು ಕಾಣಿಕೆ ಮೆರವಣಿಗೆ ಪುತ್ಯ ಕಟ್ಟೆಯಿಂದ ಆರಂಭ ಗೊಂಡು ದೇವಳಕ್ಕೆ ಸಮರ್ಪಣೆ ಗೊಳ್ಳಲಿದೆ. ದಂಡಮಾಲೆ ಹಾಕಿ ಬಲಿ , ಬೇತಾಳಗಳು ಇಳಿಯುವುದು.ಫೆ4. ರಂದು ಶ್ರೀ ದೇವರ ಉತ್ಸವ, ಮಹಾ ಪೂಜೆ.ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಜರುಗಲಿದೆ.

ಫೆ.7.ರಂದು ಕವಾಟೋದ್ಜಾಟನೆ ದೇವರಿಗೆ ಅಭಿಷೇಕ ,ಬಲಿ ಹೊರಟು ಅವಭೃತ ಸ್ನಾನ ,ಧ್ವಜಾವರೋಹಣ , ಮಹಾಪೂಜೆ ಜರುಗಲಿದೆ.ಸಂಜೆ ದೇಗುಲದಿಂದ ಶ್ರೀ ಕಾಚುಕುಜುಂಬ, ಉಳ್ಳಾಕುಲು ದೈವಗಳ ಭಂಡಾರ ವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿ ಬೈಲಿಗೆ ಹೋಗಿ ಧ್ವಜಾರೋಹಣ , ಶ್ರೀ ಕಾಚುಕುಜುಂಬ ದೈವದ ನೇಮ. ಫೆ.8 ರಂದು ಮುಂಜಾನೆ ಗರಡಿ ಬೈಲಿನ ಮೂಲ ನಾಗನ ಕಟ್ಟೆಯಲ್ಲಿ ತಂಬಿಲ ಹಾಗೂ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ, ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ ,ಮಹಾಪೂಜೆ ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ಜರುಗಲಿದೆ. ರಾತ್ರಿ ಶಿರಾಡಿ ದೈವದ ಬಂಡಾರ ಬರುವುದು.ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ ಜರುಗಲಿದೆ.

ವಿಶೇಷ ಆಕರ್ಷಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು:


ಫೆ .3.ಹಸಿರು ಕಾಣಿಕೆ ಮೆರವಣಿಗೆಯಲ್ಲಿ ಮತ್ತು ಫೆ.6. ರಾತ್ರಿ ಬ್ರಹ್ಮ ರಥೋತ್ಸವದ ವೇಳೆ ರಾಜ್ಯ ಪ್ರಶಸ್ತಿ ವಿಜೇತ ರಮೇಶ್ ಕಲ್ಲಡ್ಕ ರವರ ಶಿಲ್ಪ ಗೊಂಬೆ ಬಳಗದಿಂದ ಕೀಲು ಕುದುರೆ , ಕರಗೃತ್ಯ,ಗೊಂಬೆಯಾಟ ವಿಶೇಷ ಆಕರ್ಷಣೆಯಾಗಲಿದೆ.

ಜ.3 ರಂದು ರಾತ್ರಿ ಗಂಟೆ 7 ರಿಂದ ಡಾನ್ಸ್ & ಬೀಟ್ಸ್ ಪಂಜ ಮತ್ತು ಬೆಳ್ಳಾರೆ ಇದರ ವಿದ್ಯಾರ್ಥಿಗಳಿಂದ ನೃತ್ಯ ಸಂಭ್ರಮ ಪ್ರದರ್ಶನ ಗೊಳ್ಳಲಿದೆ.

ಫೆ.5 ರಂದು ರಾತ್ರಿ ಗಂಟೆ 7 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ರವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ಪ್ರದರ್ಶನ ಗೊಳ್ಳಲಿದೆ.