ಬೆಳ್ತಂಗಡಿ ಸಂಚಾರ ಠಾಣೆಯ ಕಿಶನ್ ರಾಜ್ ಆಲ್ ಇಂಡಿಯಾ ಪೊಲೀಸ್ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

0

ಮುಂಬಯಿಯ ನಾಗ್ಪುರದಲ್ಲಿ ಫೆ.26ರಿಂದ ನಡೆಯಲಿರುವ ಆಲ್ ಇಂಡಿಯಾ ಪೊಲೀಸ್ ವಾಲಿಬಾಲ್ ಪಂದ್ಯಾಟಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಕಿಶನ್ ರಾಜ್ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ.ಇವರು ಕರ್ನಾಟಕ ರಾಜ್ಯ ಪೊಲೀಸ್ ವಾಲಿಬಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಮೂಲತಹಃ ಸುಳ್ಯದ ಅಡ್ಕಾರ್ ನವರಾದ ಇವರು 2023ರಲ್ಲಿ ಪಂಜಾಬ್‌ನಲ್ಲಿ ನಡೆದ ಆಲ್ ಇಂಡಿಯಾ ಪೊಲೀಸ್ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಾಲಿಬಾಲ್ ತಂಡವನ್ನು ಪ್ರತಿನಿಧಿಸಿ ನಾಲ್ಕನೇ ಸ್ಥಾನ ಪಡೆದಿದ್ದರು.