p>

ಪಂಜ ಸೀಮೆ ದೇವಳದಲ್ಲಿ ವರ್ಷಾವಧಿ ಜಾತ್ರೋತ್ಸವ- ನಿತ್ಯ ಬಲಿ

0

ಭರತನಾಟ್ಯ ಪ್ರದರ್ಶನ
ಫೆ.3:(ನಾಳೆ) ವೈಭವದ ಹಸಿರು ಕಾಣಿಕೆ ಮೆರವಣಿಗೆ

ಕಲ್ಲಡ್ಕ ಗೊಂಬೆ, ಕೀಲು ಕುದುರೆ,ಕರಗ ನೃತ್ಯ ತಂಡ ವಿಶೇಷ ಆಕರ್ಷಣೆ

ರಾತ್ರಿ ನೃತ್ಯ ಸಂಭ್ರಮ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಜ.24 ರಿಂದ ಫೆ.9 ರ ತನಕ ನಡೆಯಲಿದೆ.

ಫೆ.1. ರಂದು ರಾತ್ರಿ ಧ್ವಜಾರೋಹಣ ನಡೆಯಿತು.ಫೆ.2 ರಂದು ಮುಂಜಾನೆ ಬಂಟಮಲೆಯ ತೀರ್ಥದ ಸ್ಥಳದಲ್ಲಿ ಪೂಜೆ ಸಲ್ಲಿಸಿ ಜಾತ್ರೆಗೆ ತೀರ್ಥ ತರಲಾಯಿತು. ಮಹಾಪೂಜೆ, ನಿತ್ಯ ಬಲಿ ಜರುಗಿತು.

ರಾತ್ರಿ ಪ್ರಣತಿ ಚೈತನ್ಯ ಪದ್ಯಾನ ಮತ್ತು ಪದಯಾನ ತಂಡದವರಿಂದ ಭರತನಾಟ್ಯ ಪ್ರದರ್ಶನ ಗೊಂಡಿತ್ತು. ಉತ್ಸವ ಸಮಿತಿಯವರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.

ಫೆ.3.ರಂದು ಮಹಾಪೂಜೆ , ನಿತ್ಯಬಲಿ ಸಂಜೆ ಹಸಿರು ಕಾಣಿಕೆ ಮೆರವಣಿಗೆ ಪುತ್ಯ ಕಟ್ಟೆಯಿಂದ ಆರಂಭ ಗೊಂಡು ದೇವಳಕ್ಕೆ ಸಮರ್ಪಣೆ ಗೊಳ್ಳಲಿದೆ.
ದಂಡಮಾಲೆ ಹಾಕಿ ಬಲಿ , ಬೇತಾಳಗಳು ಇಳಿಯುವುದು.ಫೆ4. ರಂದು ಶ್ರೀ ದೇವರ ಉತ್ಸವ, ಮಹಾ ಪೂಜೆ ನಡೆಯಲಿದೆ.

ಹಸಿರು ಕಾಣಿಕೆ ಮೆರವಣಿಗೆಯಲ್ಲಿ ವೇಳೆ ರಾಜ್ಯ ಪ್ರಶಸ್ತಿ ವಿಜೇತ ರಮೇಶ್ ಕಲ್ಲಡ್ಕ ರವರ ಶಿಲ್ಪ ಗೊಂಬೆ ಬಳಗದಿಂದ ಕೀಲು ಕುದುರೆ , ಕರಗೃತ್ಯ,ಗೊಂಬೆಯಾಟ ವಿಶೇಷ ಆಕರ್ಷಣೆಯಾಗಲಿದೆ.
ನೃತ್ಯ ಸಂಭ್ರಮ:
ರಾತ್ರಿ ಗಂಟೆ 7 ರಿಂದ ಡಾನ್ಸ್ & ಬೀಟ್ಸ್ ಪಂಜ ಮತ್ತು ಬೆಳ್ಳಾರೆ ಇದರ ವಿದ್ಯಾರ್ಥಿಗಳಿಂದ ನೃತ್ಯ ಸಂಭ್ರಮ ಪ್ರದರ್ಶನ ಗೊಳ್ಳಲಿದೆ.

ಫೆ.4.ರಂದು ಶ್ರೀ ದೇವರ ಉತ್ಸವ, ಮಧ್ಯಾಹ್ನ ಮಹಾ ಪೂಜೆ ಉತ್ಸವ ಅನ್ನ ಸಂತರ್ಪಣೆ ಜರುಗಲಿದೆ.

ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಜರುಗಲಿದೆ.

ಫೆ.7.ರಂದು ಕವಾಟೋದ್ಜಾಟನೆ ದೇವರಿಗೆ ಅಭಿಷೇಕ ,ಬಲಿ ಹೊರಟು ಅವಭೃತ ಸ್ನಾನ ,ಧ್ವಜಾವರೋಹಣ , ಮಹಾಪೂಜೆ ಜರುಗಲಿದೆ.ಸಂಜೆ ದೇಗುಲದಿಂದ ಶ್ರೀ ಕಾಚುಕುಜುಂಬ, ಉಳ್ಳಾಕುಲು ದೈವಗಳ ಭಂಡಾರ ವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿ ಬೈಲಿಗೆ ಹೋಗಿ ಧ್ವಜಾರೋಹಣ , ಶ್ರೀ ಕಾಚುಕುಜುಂಬ ದೈವದ ನೇಮ. ಫೆ.8 ರಂದು ಮುಂಜಾನೆ ಗರಡಿ ಬೈಲಿನ ಮೂಲ ನಾಗನ ಕಟ್ಟೆಯಲ್ಲಿ ತಂಬಿಲ ಹಾಗೂ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ, ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ ,ಮಹಾಪೂಜೆ ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ಜರುಗಲಿದೆ. ರಾತ್ರಿ ಶಿರಾಡಿ ದೈವದ ಬಂಡಾರ ಬರುವುದು.ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ ಜರುಗಲಿದೆ

ವಿಶೇಷ ಆಕರ್ಷಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು:
ಫೆ.5 ರಂದು ರಾತ್ರಿ ಗಂಟೆ 7 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ರವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ಪ್ರದರ್ಶನ ಗೊಳ್ಳಲಿದೆ.

ಫೆ .6 ರಂದು ರಾತ್ರಿ ಬ್ರಹ್ಮರಥೋತ್ಸವದಂದು
ರಾಜ್ಯ ಪ್ರಶಸ್ತಿ ವಿಜೇತ ರಮೇಶ್ ಕಲ್ಲಡ್ಕ ರವರ ಶಿಲ್ಪ ಗೊಂಬೆ ಬಳಗದಿಂದ ಕೀಲು ಕುದುರೆ , ಕರಗೃತ್ಯ,ಗೊಂಬೆಯಾಟ ವಿಶೇಷ ಆಕರ್ಷಣೆಯಾಗಲಿದೆ. ಅನೇಕ ಭಜನಾ ತಂಡಗಳಿಂದ ಕುಣಿತ ಭಜನೆ, ಭಜನಾ ಸಂಕೀರ್ತನೆ ನಡೆಯಲಿದೆ.