ಉಬರಡ್ಕ- ಮಿತ್ತೂರು- ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿ ವಿಳಂಬ: ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆಯ ಎಚ್ಚರಿಕೆ

0

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕ- ಮಿತ್ತೂರು- ಉಳ್ಳಾಕುಲು ದೈವಸ್ಥಾನ ರಸ್ತೆ ಅಭಿವೃದ್ಧಿಗೆ ರೂ.30ಲಕ್ಷ ಬಿಡುಗಡೆ ಗೊಂಡರೂ ಕಾಮಗಾರಿ ಆರಂಭವಾಗಿಲ್ಲವೆಂದು ಗ್ರಾಮಸ್ಥರು ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕಳೆದ ಮಾರ್ಚ್ ನಲ್ಲಿ ಈ ಕಾಮಗಾರಿ ಸೇರಿದಂತೆ ಸುಳ್ಯ ವಿಧಾನ ಸಭಾ ಕ್ಷೇತ್ರದಾದ್ಯಂತ ವಿವಿಧ ಕಾಮಗಾರಿಗಳಿಗೆ ಒಂದು ಸಾವಿರ ಲಕ್ಷ ಹಣ ಬಿಡುಗಡೆಗೊಂಡಿತ್ತು. ವಿವಿಧ ಕಡೆಗಳಲ್ಲಿ ಕಾಮಗಾರಿ ನಡೆದರೂ ಇನ್ನೂ ಈ ಕಾಮಗಾರಿ ಆರಂಭಗೊಂಡಿಲ್ಲ. ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೇರಿ ಒಂದು ವಾರದ ಒಳಗೆ ಸುಳ್ಯ ಲೋಕೋಪಯೋಗಿ ಇಲಾಖೆಯ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹರೀಶ್ ರೈ ಉಬರಡ್ಕ ತಿಳಿಸಿದ್ದಾರೆ.