ಪಂಜ ಸೀಮೆ ದೇವಳದಲ್ಲಿ ವರ್ಷಾವಧಿ ಜಾತ್ರೋತ್ಸವ-ವೈಭವದ ಹಸಿರು ಕಾಣಿಕೆ ಮೆರವಣಿಗೆ

0

🔹 ಕಲ್ಲಡ್ಕ ಗೊಂಬೆ, ಕೀಲು ಕುದುರೆ,ಕರಗ ನೃತ್ಯ,ಬಣ್ಣದ ಕೊಡೆಗಳು, ಚೆಂಡೆ ತಂಡ ವಿಶೇಷ ಆಕರ್ಷಣೆ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ನಡೆಯುತ್ತಿದ್ದು ಫೆ.3 ರಂದು ಜಾತ್ರೋತ್ಸವಕ್ಕೆ ಹಸಿರು ಕಾಣಿಕೆ ಸಮರ್ಪಣೆ ವಿಜೃಂಭಣೆಯಿಂದ ನಡೆಯಿತು.


.ಸಂಜೆ ವೈಭವದ ಹಸಿರು ಕಾಣಿಕೆ ಮೆರವಣಿಗೆ ಪುತ್ಯ ಕಟ್ಟೆ(ಸತ್ಯಕಟ್ಟೆ)ಯಿಂದ ಆರಂಭ ಗೊಂಡು ದೇವಳಕ್ಕೆ ಸಮರ್ಪಣೆ ಗೊಂಡಿತು.


ದೈವದ ಮಧ್ಯಸ್ಥ ತಿಮ್ಮಪ್ಪ ಗೌಡ ಪುತ್ಯರವರು ಪ್ರಾರ್ಥಿಸಿ ಬಳಿಕ ತೆಂಗಿನ ಕಾಯಿ ಒಡೆದು ಮೆರವಣಿಗೆ ಜರುಗಿತು. ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್,ಹಸಿರು ಸಂಚಾಲಕರಾದ ಪವನ್ ಪಲ್ಲತ್ತಡ್ಕ, ಶರತ್ ಕುದ್ವ , ಉತ್ಸವ ಸಮಿತಿ ಸದಸ್ಯರು,ವ್ಯವಸ್ಥಾಪನಾ ಸಮಿತಿ ನಿಕಟಪೂರ್ವಾಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು,

ವಿವಿಧ ಸಮಿತಿಗಳ ಸಂಚಾಲಕರು ,,, ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.

ಹಸಿರು ಕಾಣಿಕೆ ಮೆರವಣಿಗೆಯಲ್ಲಿ ರಾಜ್ಯ ಪ್ರಶಸ್ತಿ ವಿಜೇತ ರಮೇಶ್ ಕಲ್ಲಡ್ಕ ರವರ ಶಿಲ್ಪ ಗೊಂಬೆ ಬಳಗದಿಂದ ಕೀಲು ಕುದುರೆ , ಕರಗೃತ್ಯ,ಗೊಂಬೆಯಾಟ , ಬಣ್ಣದ ಕೊಡೆಗಳು ಹಾಗೂ ಬ್ಯಾಂಡ್ ವಾಲಗ, ಚೆಂಡೆ , ನೂರಾರು ವಾಹನಗಳ ಸಾಲು ವಿಶೇಷ ಆಕರ್ಷಣೆಯಾಗಿತ್ತು.
ರಾತ್ರಿ ದಂಡಮಾಲೆ ಹಾಕಿ ಬಲಿ , ಬೇತಾಳಗಳು ಇಳಿಯಲಿದೆ.

ನೃತ್ಯ ಸಂಭ್ರಮ:
ರಾತ್ರಿ ಗಂಟೆ 7 ರಿಂದ ಡಾನ್ಸ್ & ಬೀಟ್ಸ್ ಪಂಜ ಮತ್ತು ಬೆಳ್ಳಾರೆ ಇದರ ವಿದ್ಯಾರ್ಥಿಗಳಿಂದ ನೃತ್ಯ ಸಂಭ್ರಮ ಪ್ರದರ್ಶನ ಗೊಳ್ಳಲಿದೆ.

ಫೆ.4.ರಂದು ಶ್ರೀ ದೇವರ ಉತ್ಸವ, ಮಧ್ಯಾಹ್ನ ಮಹಾ ಪೂಜೆ ಉತ್ಸವ ಅನ್ನ ಸಂತರ್ಪಣೆ ಜರುಗಲಿದೆ.

ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಜರುಗಲಿದೆ.

ಫೆ.7.ರಂದು ಕವಾಟೋದ್ಜಾಟನೆ ದೇವರಿಗೆ ಅಭಿಷೇಕ ,ಬಲಿ ಹೊರಟು ಅವಭೃತ ಸ್ನಾನ ,ಧ್ವಜಾವರೋಹಣ , ಮಹಾಪೂಜೆ ಜರುಗಲಿದೆ.ಸಂಜೆ ದೇಗುಲದಿಂದ ಶ್ರೀ ಕಾಚುಕುಜುಂಬ, ಉಳ್ಳಾಕುಲು ದೈವಗಳ ಭಂಡಾರ ವನ್ನು ಮೆರವಣಿಗೆ ಮೂಲಕ ಮೂಲಸ್ಥಾನ ಗರಡಿ ಬೈಲಿಗೆ ಹೋಗಿ ಧ್ವಜಾರೋಹಣ , ಶ್ರೀ ಕಾಚುಕುಜುಂಬ ದೈವದ ನೇಮ. ಫೆ.8 ರಂದು ಮುಂಜಾನೆ ಗರಡಿ ಬೈಲಿನ ಮೂಲ ನಾಗನ ಕಟ್ಟೆಯಲ್ಲಿ ತಂಬಿಲ ಹಾಗೂ ಶ್ರೀ ಉಳ್ಳಾಕುಲು ದೈವದ ನೇಮ ,ಪ್ರಸಾದ ವಿತರಣೆ , ಧ್ವಜಾವರೋಹಣ, ಶ್ರೀ ದೇವಳದಲ್ಲಿ ಸಂಪ್ರೋಕ್ಷಣೆ ,ಮಹಾಪೂಜೆ ವೈದಿಕ ಮಂತ್ರಾಕ್ಷತೆ ಪ್ರಸಾದ ವಿತರಣೆ ಜರುಗಲಿದೆ. ರಾತ್ರಿ ಶಿರಾಡಿ ದೈವದ ಬಂಡಾರ ಬರುವುದು.ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವದ ನೇಮ ಜರುಗಲಿದೆ.

ವಿಶೇಷ ಆಕರ್ಷಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು:
ಫೆ.5 ರಂದು ರಾತ್ರಿ ಗಂಟೆ 7 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಧರ್ಮಸ್ಥಳ ರವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ಪ್ರದರ್ಶನ ಗೊಳ್ಳಲಿದೆ.
ಫೆ .6 ರಂದು ರಾತ್ರಿ ಬ್ರಹ್ಮರಥೋತ್ಸವದಂದು
ರಾಜ್ಯ ಪ್ರಶಸ್ತಿ ವಿಜೇತ ರಮೇಶ್ ಕಲ್ಲಡ್ಕ ರವರ ಶಿಲ್ಪ ಗೊಂಬೆ ಬಳಗದಿಂದ ಕೀಲು ಕುದುರೆ , ಕರಗೃತ್ಯ,ಗೊಂಬೆಯಾಟ ವಿಶೇಷ ಆಕರ್ಷಣೆಯಾಗಲಿದೆ. ಅನೇಕ ಭಜನಾ ತಂಡಗಳಿಂದ ಕುಣಿತ ಭಜನೆ, ಭಜನಾ ಸಂಕೀರ್ತನೆ ನಡೆಯಲಿದೆ.