ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

0

ಸುಳ್ಯ ಗೌಡರ ಯುವ ಸೇವಾ ಸಂಘದ ವತಿಯಿಂದ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಸದಸ್ಯತ್ವಕ್ಕಾಗಿ ಅರ್ಜಿ ಕರೆಯಲಾಗಿದೆ.
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಅರ್ಜಿ ಫಾರಂ ಲಭ್ಯವಿದ್ದು ಸದಸ್ಯತ್ವಕ್ಕಾಗಿ 1,650 /- ರೂ ಪಾವತಿಸಿ ಅರ್ಜಿ ಪಡೆದುಕೊಳ್ಳಬಹುದು.


ಅರ್ಜಿ ಸಲ್ಲಿಸುವಾಗ ಗೌಡ ಪದನಾಮ ಇರುವ ಯಾವುದೇ ಒಂದು ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
( ಆಧಾರ್ ಕಾರ್ಡ್, ಟಿ.ಸಿ, ಜಾತಿ ಪ್ರಮಾಣ ಪತ್ರ,ಎಸ್.ಎಸ್‌ಎಲ್.ಸಿ.ಮಾರ್ಕ್ ಕಾರ್ಡ್ ಇದರಲ್ಲಿ ಯಾವುದಾದರೊಂದು ಗೌಡ ಪದನಾಮ ಇರುವಂತದ್ದು) ಸಲ್ಲಿಸಿ ರಾಜ್ಯ ಒಕ್ಕಲಿಗ ಸಂಘದ ಸದಸ್ಯತ್ವ ಪಡೆಕೊಳ್ಳಬೇಕೆಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ.