ಪಂಜ ಯಕ್ಷಗಾನ ಬಯಲಾಟ:ಸಿರಿಬಾಗಿಲು ಪ್ರತಿಷ್ಠಾನಕ್ಕೆ ಗೌರವ

0

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನಕ್ಕೆ ಪಂಜದಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟದಲ್ಲಿ ಫೆ.5 ರಂದು ಗೌರವಿಸಲಾಯಿತು.

ಗಡಿನಾಡು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನದ ಮೂಲಕ ,ಕನ್ನಡ- ಸಂಸ್ಕೃತಿ- ಸಾಹಿತ್ಯ- ಕಲೆಯ ಸಮಗ್ರ ಅಧ್ಯಯನಕ್ಕೆ ವಿವಿಧ ಅಧ್ಯಯನ ಯೋಗ್ಯ ಚಟುವಟಿಕೆ ನಡೆಸುತ್ತಿರುವ ಪ್ರತಿಷ್ಠಾನವು, ಭವನದಲ್ಲಿ ತೆಂಕುತಿಟ್ಟು ಯಕ್ಷಗಾನ ಮ್ಯೂಸಿಯಂ- ಪುಸ್ತಕ ಭಂಡಾರ- ಪುಸ್ತಕ ಪ್ರಕಾಶ -ಕೀರ್ತಿಶೇಷ ಕಲಾವಿದರ ಭಾವಚಿತ್ರ ಅನಾವರಣ ಮುಂತಾದ ಯೋಜನೆ ಹಮ್ಮಿಕೊಂಡು ಯಶಸ್ವಿಯಾಗಿದೆ.

ಧರ್ಮಸ್ಥಳ ಮೇಳದ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಡಾ.ಅನಿಲ್ ಕುದ್ಮಾರುಬೆಟ್ಟು ಅವರು ಪ್ರತಿಷ್ಠಾನಕ್ಕೆ ಗೌರವ ಫಲಕ ನೀಡಿ ಅಭಿನಂದಿಸಿದರು.ಮೇಳದ ಪ್ರಧಾನ ಭಾಗವತ ಸಿರಿಬಾಗಿಲು ರಾಮಕೃಷ್ಣ ಮಯ್ಯ ಸನ್ಮಾನ ಸ್ವೀಕರಿಸಿದರು.ಕಾರ್ಯಕ್ರಮದಲ್ಲಿ ಮೇಳದ ಪ್ರಬಂಧಕ ಬಿ. ಯನ್. ಗಿರೀಶ ಹೆಗ್ಡೆ ಯವರು ಅಭಿನಂದನಾ ಭಾಷಣ ಮಾಡಿದರು.

ಧರ್ಮಸ್ಥಳ ಮೇಳದ ವರಿಂದ ಕಾರುಣ್ಯಾಂಬುಧಿ ಶ್ರೀ ರಾಮ ಯಕ್ಷಗಾನ ಬಯಲಾಟ ನಡೆಯಿತು.

ಕಲಾಭಿಮಾನಿಗಳಾದ ಡಾ. ಸತ್ಯನಾರಾಯಣ ಕಾವು, ವಿಜಯ ಭಟ್ ಪಂಜ ಉಪಸ್ಥಿತರಿದ್ದರು. ಜಯರಾಮ ಕಲ್ಲಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.