ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಭಕ್ತಿ ,ಸಂಭ್ರಮದ ಜಾತ್ರೋತ್ಸವ

0

ಇಂದು ಬೆಳಿಗ್ಗೆ ಶ್ರೀ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ, ರಾತ್ರಿ ದೈವಗಳ ನೇಮೋತ್ಸವ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದ್ದು ಇಂದು ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಬರುವುದು, ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ,ದರ್ಶನ ಬಲಿ ,ಬಟ್ಟಲು ಕಾಣಿಕೆ ನಡೆಯಲಿದೆ.


ನಂತರ ಶುದ್ಧಿ ಕಲಶ,ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ,ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 10.00 ರಿಂದ ದೈವಗಳ ನಡಾವಳಿ ನಡೆಯಲಿದೆ.


ಫೆ.09 ರಂದು ಬೆಳಿಗ್ಗೆ ಗಂಟೆ 9.00 ರಿಂದ ಶತರುದ್ರಾಭಿಷೇಕ,ಅಶ್ವಥ್ಥನಾರಾಯಣ ಪೂಜೆ,108 ಕಾಯಿ ಗಣಪತಿ ಹೋಮ ನಡೆಯಿತು. ಭಜನೆ,ಕಲಶಾಭಿಷೇಕಗಳು ನಡೆಯಿತು.ನಂತರ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.


ರಾತ್ರಿ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮತ್ತು ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.
ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ವಸಂತಕಟ್ಟೆ ಪೂಜೆ ನಡೆಯಿತು.