ಕೃಷ್ಣಮ್ಮ ಕಾಯರ ಕಾಣಿಯೂರುರವರಿಗೆ ಶ್ರದ್ಧಾಂಜಲಿ – ವೈಕುಂಠ ಸಮಾರಾಧನೆ

0

ಮುಪ್ಪೇರ್ಯ ಗ್ರಾಮದ ಕಾಯರ ಕಾಣಿಯೂರು ಮನೆ ಕೃಷ್ಣಮ್ಮರವರು ಜ.28 ರಂದು ನಿಧನರಾಗಿದ್ದು ಅವರಿಗೆ ಶ್ರದ್ಧಾಂಜಲಿ ಮತ್ತು ವೈಕುಂಠ ಸಮಾರಾಧನೆಯು ಫೆ.13 ರಂದು ಕಾಯರ ಕಾಣಿಯೂರು ಮನೆಯಲ್ಲಿ ನಡೆಯಿತು.


ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ರವರು ಕೃಷ್ಣಮ್ಮರವರ ಬಗ್ಗೆ ಗುಣಗಾನಗೈದು ನುಡಿನಮನ ಸಲ್ಲಿಸಿದರು.
ಆಗಮಿಸಿದ ನೂರಾರು ಜನರು ಮೃತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಪುತ್ರ ಶೇಖರ ಕೆ.ಪಿ,ಪುತ್ರಿಯರಾದ ಶ್ರೀಮತಿ ಲಕ್ಷ್ಮೀ, ಶ್ರೀಮತಿ ಗುಲಾಬಿ ,ಸೊಸೆ,ಅಳಿಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.