ಆಲೆಟ್ಟಿ ಪಂಜಿಮಲೆ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಪ್ರಯುಕ್ತ ಯಕ್ಷಗಾನ ಬಯಲಾಟ

0

ಆಲೆಟ್ಟಿ ಪಂಜಿಮಲೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದಂದು ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಬಯಲಾಟ ಪ್ರದರ್ಶನವಾಯಿತು.
ಸಂಜೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ತೀರ್ಥಕುಮಾರ್ ವಾಲ್ತಾಜೆ ವಹಿಸಿದ್ದರು. ಒತ್ತೆಕೋಲ ಸಮಿತಿ ಅಧ್ಯಕ್ಷ ಸುಧಾಕರ ಆಲೆಟ್ಟಿ ದೀಪ ಪ್ರಜ್ವಲಿಸಿದರು. ಆಲೆಟ್ಟಿ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ, ಸದಸ್ಯೆ ಸತ್ಯಕುಮಾರ್ ಆಡಿಂಜ, ಸದಾಶಿವ ದೇವಳದ ವ್ಯ.ಸ.ಸದಸ್ಯ ಅಚ್ಚುತ ಮಣಿಯಾಣಿ ಆಲೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಿಕ ಬಪ್ಪನಾಡು ದುರ್ಗಾಪರಮೇಶ್ವರಿ ಮೇಳದವರಿಂದ ಶಿವ ಕಲ್ಯಾಣ ವಿರಚಿತ ಶಿವದೂತೆ ಗುಳಿಗೆ ಯಕ್ಷಗಾನ ಬಯಲಾಟ ಪ್ರದರ್ಶನವಾಯಿತು.