ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಜಾತ್ರೋತ್ಸವದ ಸಂಭ್ರಮ

0

ಷಣ್ಮುಖ ಸ್ವಾಮಿಗೆ ದರ್ಶನ ಬಲಿ – ಬಟ್ಟಲುಕಾಣಿಕೆ – ರಾಜಾಂಗಣ ಪ್ರಸಾದ

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳವರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ಫೆ.20ರಂದು ಬೆಳಿಗ್ಗೆ ಶ್ರೀ ಷಣ್ಮುಖ ಸ್ವಾಮಿಗೆ ಉತ್ಸವ ಬಲಿ, ದರ್ಶನ ಬಲಿ, ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.

ಬೆಳಿಗ್ಗೆ ಶ್ರೀ ದೇವರ ಉತ್ಸವ ಬಲಿ ಹೊರಟು, ದರ್ಶನ ಬಲಿ, ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ, ಸಂಪ್ರೋಕ್ಷಣೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವಿವಿಧ ಜವಾಬ್ದಾರಿಯ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ಜರುಗಲಿದ್ದು, ರಾತ್ರಿ
ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಮಂಗಳೂರಿನ ಸಾಯಿಶಕ್ತಿ ಕಲಾ ಬಳಗದವರಿಂದ ತುಳು ಪೌರಾಣಿಕ ನಾಟಕ “ಬೊಳ್ಳಿಮಲೆತ ಶಿವಶಕ್ತಿಲು” ಪ್ರದರ್ಶನಗೊಳ್ಳಲಿದೆ.