ಅಮರಮುಡ್ನೂರು ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿಯ ಜಾಥಾಕ್ಕೆ ಸ್ವಾಗತ- ಬೀದಿ ನಾಟಕ ಪ್ರದರ್ಶನ

0

ಅಮರಮುಡ್ನೂರು ಗ್ರಾಮ ಪಂಚಾಯತ್ ಇದರ ವತಿಯಿಂದ ಸಂವಿಧಾನ ಜಾಗೃತಿ ಜಾಥಾವನ್ನು ಫೆ.20 ರಂದು ಕುಕ್ಕುಜಡ್ಕ ಪೇಟೆಯಲ್ಲಿ ಸ್ವಾಗತಿಸಲಾಯಿತು.


ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಲಾಯಿತು. ಬಳಿಕ ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.


ಉಪಾಧ್ಯಕ್ಷೆ ಭುವನೇಶ್ವರಿ ಪದವು ಹಾಗೂ ಪಂಚಾಯತ್ ಸದಸ್ಯರು, ನೋಡೆಲ್ ಅಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಂದಾಯ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು,ವಿದ್ಯಾರ್ಥಿಗಳು, ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದರು. ಸಂವಿಧಾನ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನವಾಯಿತು.