ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ,ಬೆಳ್ಳಾರೆ ವತಿಯಿಂದ ಬೆಳ್ಳಾರೆಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ವತಿಯಿಂದ 27 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಫೆ.25 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.


ಮಧ್ಯಾಹ್ನ ಕುಲಾಲ ಭಜನಾ ತಂಡ ಸುಳ್ಯ,ಬೆಳ್ಳಾರೆ ಇವರಿಂದ ಭಜನೆ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.
ನಂತರ ಶ್ರೀ ದೇವರಿಗೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು ಬಳಿಕ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ
ನಾಗೇಶ್ ಕುಲಾಲ್, ಕಾರ್ಯದರ್ಶಿ ಧನಂಜಯ,ಉಪಾಧ್ಯಕ್ಷರಾದ ಸುಮಿತ್ರಾ ರವಿಚಂದ್ರ ಮಣಿಮಜಲು,ಖಜಾಂಜಿ ದಿನೇಶ್ ನೆಟ್ಟಾರು ಮತ್ತು ಆಡಳಿತ ಸಮಿತಿ ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.