ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ದ. ಕ. ಜಿಲ್ಲೆಯನ್ನು ಪ್ರತಿನಿಧಿಸಿದ ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳು

0

ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ (ರಿ.) ಶಿವಮೊಗ್ಗ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ | ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ೬ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯು ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ ಫೆ. ೨೫ ರಂದು ನಡೆಯಿತು.
೦೭ ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಶೈನಿ ಕೊರ೦ಬಡ್ಕ ದ್ವಿತೀಯ ಸ್ಥಾನ, ೦೮ ರಿಂದ ೧೦ ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ಮಣಿಪ್ರಕಾಶ್ ಕಡೋಡಿ ಪ್ರಥಮ ಸ್ಥಾನ, ೦೮ ರಿಂದ ೧೦ ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಜಿಶಾ ಕೊರ೦ಬಡ್ಕ ಪ್ರಥಮ ಸ್ಥಾನ ಸ್ಥಾನ ಮತ್ತು ಗೌರಿತಾ. ಕೆ. ಜಿ ಚತುರ್ಥ ಸ್ಥಾನ, ನಿಹಾನಿ ವಾಲ್ತಾಜೆ ಪಂಚಮ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣವನ್ನು ಯೋಗ ಗುರು ಶರತ್ ಮರ್ಗಿಲಡ್ಕ ನೀಡಿರುತ್ತಾರೆ.