ಫಾರೆನ್ಸಿಕ್ ಲಿಖಿತ ಪರೀಕ್ಷೆಯಲ್ಲಿ ಬಂಟ್ವಾಳ ಗ್ರಾಮಾಂತರ ಎಸ್ಐ ಹರೀಶ್ ಎಂ.ಆರ್ . ಪ್ರಥಮ

0

ಫೆಬ್ರವರಿ 12 ರಿಂದ 16 ರವರೆಗೆ ಉತ್ತರಪ್ರದೇಶದ ಲಕ್ನೋದಲ್ಲಿ ಜರಗಿದ 67ನೇ ರಾಷ್ಟ್ರಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಉಪ್ಪಿನಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ ಎಸ್ ಹಾಗೂ ಬಂಟ್ವಾಳ ಗ್ರಾಮಾಂತರ ಎಸ್ಐ ಹರೀಶ್ ಎಂ.ಆರ್. ರವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದರು.

ಅವರುಗಳ ಪೈಕಿ ಹರೀಶ್ ಎಂ.ಆರ್. ರವರು ಫಾರೆನ್ಸಿಕ್ ಸೈನ್ಸ್ ಲಿಖಿತ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಹರೀಶ್ ಎಂ.ಆರ್. ರವರು ಕೆಲವು ವರ್ಷಗಳ ಹಿಂದೆ ಸುಳ್ಯದಲ್ಲಿ ಎಸ್ಐ ಆಗಿ ಕಾರ್ಯನಿರ್ವಹಿಸಿದ್ದರು.