ಇಂದಿನಿಂದ ಉಬರಡ್ಕ ಜಾತ್ರೋತ್ಸವ ಆರಂಭ

0

ಉಬರಡ್ಕ ಮಿತ್ತೂರಿನ ಶ್ರಿ ನರಸಿಂಹ ಶಾಸ್ತಾವು ದೇವಾಲಯದ ವರ್ಷಾವಧಿ ಜಾತ್ರೋತ್ಸವವು ಇಂದಿನಿಂದ ಮಾ.6 ರ ತನಕ ವೇದಮೂರ್ತಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ.

ಇಂದು ಬೆಳಿಗ್ಗೆ ತೋರಣಮುಹೂರ್ತ ಮತ್ತು ಉಗ್ರಾಣ ಪೂಜೆ, ಹಸಿರುವಾಣಿ ಸಮರ್ಪಣೆ ನಂತರ ಶ್ರೀ ಬೆಳರಂಪಾಡಿ ವನಶಾಸ್ತಾವು ಕ್ಷೇತ್ರದಲ್ಲಿ ಸಾನಿಧ್ಯ ಕಲಶ ಮತ್ತು ಪಂಚಗವ್ಯ, ವಿಶೇಷ ಪೂಜೆ, ಶಾಸ್ತಾವು ಕ್ಷೇತ್ರದ ನಾಗನಕಟ್ಟೆ ಮತ್ತು ಬೆಟ್ಟ ತೋಟದ ಚಿತ್ರಕೂಟದಲ್ಲಿ ಸಾನಿಧ್ಯ ಕಲಶ, ಪಂಚಗವ್ಯ ಮತ್ತು ತಂಬಿಲ ಸೇವೆ ನಡೆಯಲಿದೆ. ಸಂಜೆ ಊರಿನ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಹಾಗೂ ಗ್ರಾಮದ ಭಕ್ತಾಭಿಮಾನಿಗಳಿಂದ ಸಾಂಸ್ಕೃತಿಕ ವೈವಿಧ್ಯ, ನಂತರ ಸಭಾ ಕಾರ್ಯಕ್ರಮ, ಬಳಿಕ ಆಳ್ವಾಸ್ ಧೀಂಕಿಟ ಯಕ್ಷ ಅಧ್ಯಯನ ಕೇಂದ್ರ ಮೂಡಬಿದಿರೆ ಇವರಿಂದ ನರ ಶಾರ್ದೂಲ ನಡೆಯಲಿದೆ.

ಮಾ.5 ರಂದು ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದೀಪಾರಾಧನೆ, ರಾತ್ರಿ ಸಾಮೂಹಿಕ ಪ್ರಾರ್ಥನೆ, ವಿವಿಧ ವೈದಿಕ ಕಾರ್ಯಕ್ರಮಗಳು, ಶ್ರೀ ಶಿವ ಸಾನಿಧ್ಯ ಮತ್ತು ಶ್ರೀ ನರಸಿಂಹ ಸಾನಿಧ್ಯ ಕಟ್ಟೆಗಳಲ್ಲಿ ಮಂಡಲ ಬರೆದು ಶಿವ ಪೂಜೆ ಮತ್ತು ನರಸಿಂಹ ದೇವರ ಪೂಜೆ, ಶ್ರೀ ದೇವಾಲಯದಲ್ಲಿ ರಾತ್ರಿ ಪೂಜೆ ನಡೆದು ನಂತರ ಸಾಂಸ್ಕೃತಿಕ ವಿಶೇಷ ಕಾರ್ಯಕ್ರಮ ಉಬರಡ್ಕ ಉತ್ಸವ ನಡೆಯಲಿದೆ.

ಮಾ.6 ರಂದು ಬೆಳಿಗ್ಗೆ ಶ್ರೀ ಗಣಪತಿ ಹವನ, ಸಾನಿಧ್ಯ ಕಲಶ, ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಶ್ರೀ ದೇವರ ಭೂತಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನಸಂತರ್ಪಣೆ,
ರಾತ್ರಿ ಅಲಂಕಾರ ಪೂಜೆ ಮತ್ತು ರಂಗಪೂಜೆ, ಶ್ರೀ ರಕ್ತೇಶ್ವರಿ ದೈವದ ಸಾನಿಧ್ಯದಲ್ಲಿ ದೇವಕ್ರಿಯೆಯಲ್ಲಿ ಕೋಲ ನಡಾವಳಿ ನಡೆಯಲಿದೆ.