ಸುಳ್ಯ-ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆಯ ಕಮಿಲಡ್ಕದಲ್ಲಿ ಕಾಂಕ್ರೀಟೀಕರಣಕ್ಕೆ ಗುದ್ದಲಿಪೂಜೆ

0

ಸುಳ್ಯ- ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆಯ ಕಮಿಲಡ್ಕದಲ್ಲಿ ಕಾಂಕ್ರೀಟೀಕರಣ ಕಾಮಗಾರಿಗೆ ಇಂದು ಗುದ್ದಲಿಪೂಜೆ ನಡೆಯಿತು.ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 10ಲಕ್ಷ‌ ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿಯ 10 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.ಶಾಸಕಿ ಕು.ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ರೈ, ಶಶಿಕಲಾ ಎ.ನೀರಬಿದಿರೆ, ಶಿಲ್ಪಾ ಸುದೇವ್, ಉಬರಡ್ಕ ಗ್ರಾ.ಪಂ.ಸದಸ್ಯ ಹರೀಶ್ ಉಬರಡ್ಕ, ಮಾಜಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಸ್ಥಳೀಯರಾದ ರಾಧಾಕೃಷ್ಣ ಮಾಣಿಬೆಟ್ಟು, ಸಿಎ ಗಣೇಶ್ ಭಟ್, ಸುರೇಶ್ಚಂದ್ರ ಕಮಿಲ, ಶಂಭಯ್ಯ ಪಾರೆ, ಸೀತಾನಂದ ಬೇರ್ಪಡ್ಕ, ಬಾಲಕೃಷ್ಣ ನಾಯರ್ ಮೊದಲಾದವರು ಉಪಸ್ಥಿತರಿದ್ದರು.ರೂ.20 ಲಕ್ಷ ಬಿಡುಗಡೆಯಾಗಿದ್ದು, ಕಾಮಗಾರಿ ಆರಂಭಗೊಂಡಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಕಾಮಗಾರಿ ನಡೆಸುವ ಯೋಜನೆ ಇದೆ. ಆಗ ತೀರಾ ಕಳಪೆಯಾದಲ್ಲಿ ವರೆಗೆ ಸರಿಯಾಗುತ್ತದೆ ಎಂದು ಹರೀಶ್ ಉಬರಡ್ಕ ತಿಳಿಸಿದ್ದಾರೆ.

ಮತ್ತೊಮ್ಮೆ ರೋಡ್ ಬ್ಲಾಕ್: ಸುಳ್ಯ- ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆಯ ನೀರಬಿದಿರೆ ಎಂಬಲ್ಲಿ ಕಾಂಕ್ರೀಟೀಕರಣಕ್ಕಾಗಿ ರಸ್ತೆ ಬ್ಲಾಕ್ ಮಾಡಲಾಗಿ, 15ದಿನಗಳ ಹಿಂದೆ ತೆರೆಯಲಾಗಿತ್ತು. ಈಗ ಅದೇ ರಸ್ತೆಯನ್ನು ಮತ್ತೆ ಬ್ಲಾಕ್ ಮಾಡಲಾಗಿದೆ.