ಅಡ್ಕಾರು: ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮೃತ್ಯು

0

ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮೃತಪಟ್ಟ ಘಟನೆ ಮಾ.7ರಂದು ಅಡ್ಕಾರಿನಲ್ಲಿ ಸಂಭವಿಸಿದೆ

ಅಡ್ಕಾರ್ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ಪೈಟಿಂಗ್ ಕೆಲಸಕ್ಕಾಗಿ ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ‌ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬವರು ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದಿದ್ದರು. ಅವರನ್ನು ಕೂಡಲೇ ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ತಲೆಗೆ ಗಂಭೀರ ಗಾಯಗಳಿತ್ತು. ಹೆಚ್ಚಿನ ಚಿಕಿತ್ಸೆ ಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದಿದ್ದರು.ಅಲ್ಲಿಂದ ಚಿಕಿತ್ಸೆ ಫಲಕಾರಿಯಾಗದ ಕಾರಣ ಅಲ್ಲಿಂದ ಮನೆಗೆ ತರುತ್ತಿರುವ ಸಂದರ್ಭದಲ್ಲಿ ಆ್ಯಂಬುಲೆನ್ಸ್ ನಲ್ಲಿ ಮೃತಪಟ್ಟರು.

ಮೃತರು ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.