ಅರಂತೋಡು: ಪಾದಾಚಾರಿಗೆ ಕಾರು ಢಿಕ್ಕಿ: ಗಂಭೀರ ಗಾಯ

0

ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪಾದಾಚಾರಿ ವ್ಯಕ್ತಿಯೋರ್ವರಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡು ಜುಮ್ಮಾ ಮಸೀದಿಯ ಬಳಿ ಮಾ.8ರಂದು ಸಂಜೆ ಸಂಭವಿಸಿದೆ.

ಅರಂತೋಡು ಗ್ರಾಮದ ಕಳುಬೈಲು ನಿವಾಸಿ ಭರತ್ ಎಂಬವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ರಿಟ್ಜ್ ಕಾರು ಢಿಕ್ಕಿ ಹೊಡೆದಿದ್ದು, ಭರತ ಅವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.