ಆಲೆಟ್ಟಿ ಸದಾಶಿವ ಭಜನಾ ಸಂಘದ ಲಕ್ಕಿ ಕೂಪನ್ ಡ್ರಾ ಫಲಿತಾಂಶ

0

ಆಲೆಟ್ಟಿ ಶ್ರೀ ಸದಾಶಿವ ಭಜನಾ ಸಂಘದ ಆಶ್ರಯದಲ್ಲಿ ದೇವಳದ ರಾಜಾಂಗಣದ ಶಾಶ್ವತ ಚಪ್ಪರ ನಿರ್ಮಾಣದ ಸಹಾಯಾರ್ಥವಾಗಿ ಹಮ್ಮಿಕೊಂಡ ಲಕ್ಕಿ ಕೂಪನ್ ಡ್ರಾ ವನ್ನು
ಮಾ.8 ರಂದು ಶಿವರಾತ್ರಿಯಂದು ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ ಹಾಗೂ ಸದಸ್ಯರು,
ಭಜನಾ ಸಂಘದ ಪದಾಧಿಕಾರಿಗಳು
ಮತ್ತು ಸದಸ್ಯರು ಉಪಸ್ಥಿತರಿದ್ದರು.
ಭಜನಾ ಸಂಘದ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.