ಕರ್ನಾಟಕ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಆರಂಭ

0

ಉಸ್ತುವಾರಿ ಸಚಿವರ ಸಹಿತ ಗಣ್ಯರು ಭಾಗಿ

ಕರ್ನಾಟಕ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಇಂದು ಸುಳ್ಯದ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನ ಅಮರಶ್ರೀಬಾಗ್ ಸುಳ್ಯದಲ್ಲಿ ಆರಂಭಗೊಂಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಗೇರು ಕೃಷಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಮಮತಾ ಡಿ. ಎಸ್. ಗಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ., ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೋಹಪಾತ್ರ, ಸರಕಾರಿ ಅಧ್ಯಕ್ಷ ತೀರ್ಥರಾಮ ಹೆಚ್‌.ಬಿ. ಉಪಸ್ಥಿತರಿದ್ದರು.

ತಹಶೀಲ್ದಾರ್ ಜಿ. ಮಂಜುನಾಥ್, ಜಿ.ಪಂ. ಉಪಕಾರ್ಯದರ್ಶಿ ಜಗದೀಶ ನಾಯಕ್ , ನಗರ ಪಂಚಾಯತ್ ಮುಖ್ಯ ಅಧಿಕಾರಿ ಸುಧಾಕರ್ ವೇದಿಕೆಯಲ್ಲಿ ಇದ್ದಾರೆ.