ಭೂಸೇನೆಯ ಲೆಫ್ಟಿನೆಂಟ್‌ ಆಗಿ ಸುಬ್ರಹ್ಮಣ್ಯದ ಅಜಿತೇಶ್‌ ಪಿ.ಎಸ್‌. ಕರ್ತವ್ಯ ಕ್ಕೆ

0

ಭೂಸೇನೆಯ ಲೆಫ್ಟಿನೆಂಟ್‌ ಆಗಿ ಸುಬ್ರಹ್ಮಣ್ಯ ಗ್ರಾಮದ ನೂಚಿಲ ನಿವಾಸಿ ಅಜಿತೇಶ್‌ ಪಿ.ಎಸ್‌. ಪೆರ್ಮುಖ ಅವರು ಕರ್ತವ್ಯ ಕ್ಕೆ ನಿಯುಕ್ತಿಗೊಂಡಿದ್ದಾರೆ.

ಕಳೆದೊಂದು ವರ್ಷಗಳ ಹಿಂದೆ ನೇಮಕಗೊಂಡಿದ್ದರು.
ಅಜಿತೇಶ್ ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಮುಗಿಸಿ ಪಿಯುಸಿಯನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಬಿಎಸ್ಸಿ ಪದವಿಯನ್ನು ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದ ಬಳಿಕ ಡೆಹ್ರಾಡೂನ್‌ನ ಫಾರೆಸ್ಟ್‌ ರಿಸರ್ಚ್‌ ಇನ್‌ಸ್ಟಿಟ್ಯೂ ಟ್‌ನಲ್ಲಿ ದ್ವಿತೀಯ ಎಂಎಸ್ಸಿ ಪದವಿ ಕಲಿತಿದ್ದರು.

ಕಳೆದ ವರ್ಷ ನಡೆದ ಭೂಸೇನೆ ನೇಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ, ಚೆನ್ನೈನ ಇಂಡಿಯನ್‌ ಆರ್ಮಿ ಆಫೀಸರ್ಸ್‌ ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಆಫಿಸರ್ಸ್‌ ಟ್ರೈನಿಂಗ್‌ ಪಡೆದಿದ್ದರು. ಅಜಿತೇಶ್‌ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀಕೃಷ್ಣ ಶರ್ಮ ಪಿ. ಅವರ ಪುತ್ರ.