ಕಿದು ಸಿಪಿಸಿಆರ್‌ಐ : ಕೃಷಿ ಸಮ್ಮೇಳನಕ್ಕೆ ಚಾಲನೆ

0


ಅಡಿಕೆ ಆರೋಗ್ಯಕ್ಕೆ ಹಾನಿಕರ ಎಂಬ ಬಗ್ಗೆ ಈ ಹಿಂದಿನ ಸರಕಾರ ವರದಿ ನೀಡಿದ್ದರಿಂದ ಅದು ಸುಪ್ರೀಂ ಕೋರ್ಟ್‌ನಲ್ಲಿದೆ ಅದರಿಂದ ರೇಟ್ ಇಳಿಕೆ ಕಂಡಿತ್ತು. ಆದರೆ ನಾವು ಅಡಿಕೆ ಹಾನಿಕರ ಅಲ್ಲ ಎಂಬುದನ್ನು ಸಾಬೀತು ಪಡಿಸಲು ನಮ್ಮ ಭಾಗದ ಅಡಿಕೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ದೇಶದ ಪ್ರತಿಷ್ಠಿತ ಸಂಸ್ಥೆಗಳನ್ನು ಸೇರಿಸಿಕೊಂಡು ವೈಜ್ಞಾನಿಕವಾಗಿ ಅಧ್ಯಯನ ನಡೆಸಲು ಭಾರತ ಸರಕಾ ರೂಪಾಯಿ ೧೦ ಕೋಟಿ ರೂ. ಹಣ ಮೀಸಲಿಟ್ಟು ಮುಂದಕ್ಕೆ ಹೆಜ್ಜೆ ಇಟ್ಟು ಮೊನ್ನೆ ತೀರ್ಮಾಣಕೈಗೊಳ್ಳಲಾಗಿದೆ ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.


ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣದ ಕಿದು ಸಿಪಿಸಿಆರ್‌ನಲ್ಲಿ ಕೃಷಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬ ಬಗ್ಗೆ ಕೇಂದ್ರದ ಆರೋಗ್ಯ ಸಚಿವರ ಗಮನಕ್ಕೆ ತಂದಿದ್ದೆವು. ಅಡಿಕೆ ಪರವಾಗಿ ನರೇಂದ್ರ ಮೋದಿ ನಿಂತಿದ್ದರು. ಅಡಿಕೆ ಹಾನಿಕಾರ ಅಲ್ಲ ಎಂಬ ವೈಜ್ಞಾನಿಕ ವರದಿ ಬೇಕು. ಈ ಬಗ್ಗೆ ಕಾನೂನಾತ್ಮಕ ಕ್ರಮಕ್ಕೆ ಅವರು ಬೆಂಬಲ ಸೂಚಿಸಿದ್ದರು ಎಂದರು.


ಅಡಿಕೆ ಆಮದು ಇಲ್ಲ;
ಮತ್ತೆ ಅಡಿಕೆ ಆಮದು ಮಾಡಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದುದು. ೨೦೨೦-೨೧ರಲ್ಲಿ ಭೂತನ್‌ನಿಂದ ಅಡಿಕೆ ಆಮದಿಗೆ ಯಾವುದೇ ಸಮಸ್ಯೆ ಆಗದಂತೆ ಅನುಮತಿ ನೀಡಲಾಗಿತ್ತು. ಈ ವರ್ಷ ಭೂತನ್ ಸಹಿತ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಲು ಅನುಮತಿ ನೀಡಿಲ್ಲ, ಈ ಬಗ್ಗೆ ಸರಕಾರದಲ್ಲಿ ಯಾವುದೇ ಆದೇಶವಾಗಿಲ್ಲ. ಈ ವಿದೇಶದಿಂದ ಅಡಿಕೆ ಆಮದು ಎಂಬ ಸುದ್ದಿ ಹಬ್ಬಿಸಿ ದರ ಕುಸಿತ ಮಾಡಿ ಅನಾವಶ್ಯಕವಾಗಿ ಗೊಂಸಲ ಸೃಷ್ಟಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
ಅಡಿಕೆ ಎಲೆಚುಕ್ಕಿ, ಹಳದಿ ಎಲೆ ರೋಗ ನಿರ್ವಹಣೆಗೆ ೨೨೫ ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಕ್ರಮಕ್ಕೆ ಪೂರಕ್ಕೆ ಕ್ರಮಕ್ಕೆ ರಾಜ್ಯಕ್ಕೆ ಸೂಚನೆ ನೀಡಿದ್ದೇವೆ ಎಂದರು. ತೆಂಗಿನಲ್ಲಿ ಕಂಡು ಬಂದ ರೋಗ ಪರಿಹಾರ ಹಾಗೂ ಅಧ್ಯಯನಕ್ಕೂ ಕೇಂದ್ರದಿಂದ ಕೋಟ್ಯಾಂತರ ಹಣ ನೀಡಲಾಗಿದೆ ಎಂದರು.


ರೈತರ ಜೊತೆ ಭಾರತ ಸರಕಾರವಿದೆ;
ಕೃಷಿಕರು, ರೈತರ ಹಿತ ಕಾಯುವಲ್ಲಿ ನರೇಂದ್ರ ಮೋದಿ ಸರಕಾರ ಸದಾ ಜತೆಯಾಗಿದೆ. ರೈತರು ಒಂದೇ ಬೆಳೆಯನ್ನು ಹೊಂದಿಕೊಳ್ಳದೇ ಮಿಶ್ರ ಬೆಳೆಯನ್ನು ಬೆಳೆದು ಆದಾಯ ಗಳಿಸಲು ಮುಂದಾಗಬೇಕು. ಮಿಶ್ರ ಬೆಳೆ ಬೆಳೆಯುವಲ್ಲಿ ರೈತರ ಆತ್ಮಹತ್ಯೆ ಆಗಿಲ್ಲ ಎಂದ ಅವರು ಸರಕಾರದ ಸಹಕಾರ ಪಡೆದು ಕೃಷಿಯಲ್ಲೂ ಉದ್ಯಮ ಆರಂಭಿಸಿ ಯಶಸ್ಸು ಸಾಧಿಸಬಹುದು ಎಂದರು.


ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ,ಕೃಷಿಯೇ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಅವರಿಗೆ ಪರಿಹಾರ ಸೂಚಿಸಬೇಕು ಎಂಬ ನಿಟ್ಟಿನಲ್ಲಿ ಸಿಪಿಸಿಆರ್‌ಐ ಸಂಸ್ಥೆ ಕೃಷಿ ಮೇಳ ನಡೆಸುತ್ತಿರುವುದು ಶ್ಲಾಘನೀಯ. ಹಿಂದೆ ಗದ್ದೆ ಜೊತೆಗೆ ತೆಂಗು ಬೆಳೆದು ಜೀವನ ನಡೆಸುತ್ತಿದ್ದರು. ಆದರೆ ಇಂದು ಆಧುನಿಕ ಲೋಕಕ್ಕೆ ಮಾರು ಹೋಗಿ ನಮ್ಮ ಇಳುವರಿ ಕಳೆದುಕೊಳ್ಳುತ್ತಿದ್ದೇವೆ ಎಂದರು.


ಕೇಂದ್ರದ ತೋಟಗಾರಿಕಾ ಡಿಡಿಜಿ ಡಾ.ಸಂಜೀವ್ ಕುಮಾರ್ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿ, ಭಾರತ ಸರಕಾರದ ತೋಟಗಾರಿಕಾ ಇಲಾಖೆ ಆಯುಕ್ತ ಡಾ.ಪ್ರಭಾತ್ ಕುಮಾರ್, ಕೋಝೀಕೋಡ್ ಡಿಎಎಸ್‌ಡಿ ನಿರ್ದೇಶಕ ಹೋಮಿ ಚೆರಿಯನ್, ಕೊಚ್ಚಿ ಸಿಡಿಬಿ ಸಿಸಿಡಿಒ ಡಾ.ಬಿ.ಹನುಮಂತೇ ಗೌಡ, ಬಿಳಿನೆಲೆ ಗ್ರಾ.ಪಂ. ಸದಸ್ಯ ಸತೀಶ್ ಕಳಿಗೆ, ಕಿದು ಸಿಪಿಸಿಆರ್‌ಐ ವಿಜ್ಞಾನಿ ದಿವಾಕರ ವೈ ಮತ್ತಿತರರು ಉಪಸ್ಥಿತರಿದ್ದರು. ಸಿಪಿಸಿಆರ್‌ಐ ಕಾಸರಗೋಡು ನಿರ್ದೇಶಕ ಡಾ.ಕೆ.ಬಿ.ಹೆಬ್ಬಾರ್ ಪ್ರಸ್ತಾವನೆಗೈದು, ಸ್ವಾಗತಿಸಿದರು. ಡಾ.ವಿ.ನಿರಲ್ ವಂದಿಸಿದರು. ವಿಟ್ಲ ಸಿಪಿಸಿಆರ್‌ಐ ಹಿರಿಯ ವಿಜ್ಞಾನಿ ಡಾ.ನಾಗರಾಜ್ ಎನ್.ಆರ್. ಕಾರ್ಯಕ್ರಮ ನಿರೂಪಿಸಿದರು.


ಕಲ್ಪ ಸುವರ್ಣ ತಳಿ ಬಿಡುಗಡೆ;
ಸಿಪಿಸಿಆರ್‌ಐ ಅಭಿವೃದ್ಧಿಗೊಳಿಸಿದ ಕಲ್ಪ ಸುವರ್ಣ ಗಿಡ್ಡ ತಳಿಯ ಬಿಡುಗಡೆಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೆರವೇರಿಸಿದರು. ಬಳಿಕದಲ್ಲಿ ಕೊಕ್ಕೋ ಸಂಕರಣ ವಿಟ್ಲ ಕೊಕ್ಕೋ ಹೈಬೀಡ್ ೧, ವಿಟ್ಲ ಕೊಕ್ಕೋ ಹೈಬ್ರೀಡ್ ೨ ತಳಿಯನ್ನು ಅತಿಥಿಗಳು ಬಿಡುಗಡೆ ಗೊಳಿಸಿದರು. ಕೃಷಿಕರಿಗೆ ವಿತರಣೆ ಮಾಡಲಾಯಿತು. ತರಬೇತುದಾರರಿಗೆ ಪ್ರಮಾಣಪತ್ರ ಹಾಗೂ ಉಪಕರಣ, ಸುಧಾರಿತ ತೆಂಗಿನ ತಳಿಗಳ ಪ್ರಕಟಣೆ ಬಿಡುಗಡೆ ಮಾಡಲಾಯಿತು.