ದೇವರಕೊಲ್ಲಿ: ಶಾಸಕರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

0

ಕ್ಷೇತ್ರದ ಜನರ ಸಮಸ್ಯೆಗೆ ಪರಿಹಾರ ನೀಡಲು ಸದಾಸಿದ್ಧ: ಶಾಸಕ ಎ‌.ಎಸ್. ಪೊನ್ನಣ್ಣ ಭರವಸೆ

ಕಾನೂನಿನ ಚೌಕಟ್ಟಿನ ಒಳಗೆ ಕ್ಷೇತ್ರದ ಜನತೆಗೆ ಏನೇ ಸಮಸ್ಯೆ ಬಂದರೂ ತಾವು ಶಾಸಕನಾಗಿ ತಮ್ಮೊಂದಿಗೆ ಇರುತ್ತೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕ್ಷೇತ್ರದ ಜನತೆಗೆ ಭರವಸೆ ನೀಡಿದರು.

ಅವರು ಮಾ.12ರಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ದೇವರಕೊಲ್ಲಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು.

ಕ್ಷೇತ್ರದ ಜನರ ಸಮಸ್ಯೆ ಎಂದರೆ ಅದು ನನ್ನ ವೈಯುಕ್ತಿಕ ಸಮಸ್ಯೆ. ಹಾಗಾಗಿ ಅದಕ್ಕೆ ಪರಿಹಾರ ನೀಡುವಲ್ಲಿ ತಾವು ಸದಾಸಿದ್ಧರಾಗಿದ್ದೇನೆ ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಸ್ಥಳೀಯ ಯುವಕರು ಆಯೋಜಿಸಿದ್ದ ಕ್ರೀಡಾ ಕೂಟದ ಪೋಸ್ಟರನ್ನು ಶಾಸಕರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಮಡಿಕೇರಿ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಮಡಿಕೇರಿ ಡಿ.ಸಿ.ಸಿ. ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ದೇವರಕೊಲ್ಲಿಯ ಸ್ಥಳೀಯ ನಾಯಕರು, ಮದೆ ಗ್ರಾಮ ಪಂಚಾಯತ್ ಸದಸ್ಯರಾದ ಸಯೀದ್ ಅಲವಿ, ಗ್ರಾಮ ಪಂಚಾಯತ್ ಅಧ್ಯಕ್ಷ ವಿಮಲಾಕ್ಷಿ, ಉಪಾಧ್ಯಕ್ಷ ಬೈನೆರವನ ಯಶೋಧಿನಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.