ಗೀತಾ ಗುಡ್ಡೆಮನೆಯವರಿಗೆ ಝೀ ಕನ್ನಡ ಯುವರತ್ನ ಅವಾರ್ಡ್

0

ರಾಷ್ಟ್ರೀಯ ಕ್ರೀಡಾಪಟು, ಸುಳ್ಯದವರಾದ ಗೀತಾ ಗುಡ್ಡೆಮನೆ ಅವರು ಝೀ ಮೀಡಿಯಾ ಸಂಸ್ಥೆಯ ಝೀ ಕನ್ನಡ ಯುವರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗೀತಾ ಅವರ ಅಕಾಡೆಮಿಕ್ ಸಾಧನೆ ಮತ್ತು ಕ್ರೀಡಾ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕಂದಡ್ಕದ ಆನಂದ ಗೌಡ ಮತ್ತು ಶ್ರೀಮತಿ ಜಯ ದಂಪತಿಯ ಪುತ್ರಿಯಾದ ಗೀತಾ ಅವರು ಪ್ರಸ್ತುತ ಮೈಸೂರು ವಿಶ್ವ ವಿದ್ಯಾಲಯದ ಪಿ.ಎಚ್.ಡಿ. ಸ್ಕಾಲರ್ ಆಗಿದ್ದಾರೆ.

ಈ ಹಿಂದೆ ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಗೀತಾ ಅವರು ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಾಗಿದ್ದು, ರಾಜ್ಯ ಮಹಿಳಾ ಕಬಡ್ಡಿ ತಂಡದಲ್ಲಿ ಆಡಿದ್ದರಲ್ಲದೆ, ಮಹಿಳಾ ಕಬಡ್ಡಿ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಮೈಸೂರು ಹಾಗೂ ಮಂಗಳೂರು ವಿ.ವಿ.ಪರವಾಗಿಯೂ ಆಡಿದ್ದರು.