ಆತ್ಮಶಕ್ತಿ ಸಹಕಾರ ಸಂಘದಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ

0

ಶಾಸಕಿ ಭಾಗೀರಥಿ ಮುರುಳ್ಯರಿಗೆ “ಆತ್ಮ ಸಮ್ಮಾನ” ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ಸಹಕಾರ ಸಂಘದ ವತಿಯಿಮದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಂಘದ ಪ್ರಧಾನ ಕಚೇರಿ ಪಡೀಲ್‌ನಲ್ಲಿ ಮಾ. 9 ರಂದು ನಡೆಯಿತು. ಸಂಘದ ಅಧ್ಯಕ್ಷ ಚಿತ್ತಂರಜನ್ ಬೋಳಾರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಾಧಕರ ಮಹಿಳೆಯರಾದ ಸುಳ್ಯ ಶಾಸಕಿ ಕು, ಭಾಗೀರಥಿ ಮುರುಳ್ಯ ಹಾಗೂ ಮಂಗಳೂರು ಸಿಸಿಬಿ ಕ್ರೈಂನ ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿಯವರಿಗೆ ಆತ್ಮ ಸಮ್ಮಾನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರ್‌ಗಳಾದ ರೂಪಶ್ರೀ ಪೂಜಾರಿ, ಚಂದ್ರಾವತಿ ವಿಶ್ವನಾಥ್, ವೀಣಾ ಮಂಗಳ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಾಮನ್ ಕೆ., ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ. ಮತ್ತಿತರರು ಇದ್ದರು.