ಕೂತ್ಕುಂಜ: ಹಾಲು ಸಂಗ್ರಹಣೆಯ ಉಪಕೇಂದ್ರದ ಉದ್ಘಾಟನೆ

0

ಪಂಜ ಹಾಲು ಉತ್ಪಾದಕರ ಸಹಕಾರ ಸಂಘ ಇದರ ಹಾಲು ಸಂಗ್ರಹಣೆಯ ಉಪಕೇಂದ್ರವು ಕೂತ್ಕುಂಜ ಗ್ರಾಮದ ಅಡ್ಡತ್ತೋಡು ನಲ್ಲಿ ಮಾ.14 ರಂದು ನಡೆಯಿತು.

ಸಂಘದ ಪೂರ್ವಾಧ್ಯಕ್ಷ,ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಚಂದ್ರಶೇಖರ ಶಾಸ್ತ್ರಿ ರವರು ಉದ್ಘಾಟಿಸಿ ಶುಭಹಾರೈಸಿದರು.

ಸಭಾ ಕಾರ್ಯಕ್ರಮವನ್ನು ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಉದ್ಘಾಟಿಸಿ ಶುಭಹಾರೈಸಿದರು. ಸಂಘದ ಅಧ್ಯಕ್ಷ ಭಾಸ್ಕರ ನಾಯಕ್ ಬೇರ್ಯ ಸಭಾಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ದ.ಕ. ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಡಿ.ಆರ್.ಸತೀಶ್ ರಾವ್ , ದ.ಕ. ಹಾಲು ಒಕ್ಕೂಟದ ಕಡಬ ಕ್ಷೇತ್ರ ವಿಸ್ತರಣಾಧಿಕಾರಿ ಆದಿತ್ಯ ಚಿದ್ಗಲ್ಲು ಹಾಗೂ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ನೇತ್ರಾವತಿ ಕಲ್ಲಾಜೆ , ಉಪಕೇಂದ್ರದ ಕಟ್ಟಡದ ಮಾಲಕ ಧರ್ಮಪಾಲ ಗೌಡ ಕಕ್ಯಾನ ,ಸಂಘದ ಉಪಾಧ್ಯಕ್ಷ ಮೋನಪ್ಪ ಕೆಬ್ಲಾಡಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದರ್ಶ ಚಿದ್ಗಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಆದರ್ಶ ಚಿದ್ಗಲ್ಲು ಸ್ವಾಗತಿಸಿದರು ಮತ್ತು ವಂದಿಸಿದರು. ಸಂಘದ ನಿರ್ದೇಶಕರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.