ಕ್ಯಾ. ಬ್ರಿಜೇಶ್ ಚೌಟ ಸಂಸದರಾಗಿ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಕೊನ್ನಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ

0

ಮುಂದೆ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯಿಂದ ಸಂಸದ ಸ್ಥಾನಕ್ಕೆ ಸ್ಪರ್ಧಿಸಲಿರುವ ಕ್ಯಾ. ಬ್ರಿಜೇಶ್ ಚೌಟ ಅತ್ಯಧಿಕ ಮತಗಳಿಂದ ಜಯಗಳಿಸಬೇಕು ಮತ್ತು ನರೇಂದ್ರ ಮೋದಿಯವರೇ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಕೊನ್ನಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಮಾಡಿಕೊಂಡ ಘಟನೆ ಮಾ. 14ರಂದು ನಡೆದಿದೆ.


ಬಳ್ಪ ಗ್ರಾಮದ ಕೊನ್ನಡ್ಕ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನದಲ್ಲಿ ನಡೆದ ಸಂಕ್ರಮಣ ತಂಬಿಲದ ಸಂದರ್ಭದಲ್ಲಿ ಕೊರಗಜ್ಜ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಮಾನಂದ ಎಣ್ಣೆಮಜಲು, ಪ್ರಕಾಶ್ ಮೂಡ್ನೂರು, ಶೂರಪ್ಪ ಪಂಡಿ, ಕಿರಣ್ ಪಟೋಳಿ, ಮೋನಪ್ಪ ಕೊನ್ನಡ್ಕ ಮತ್ತಿತರರು ಉಪಸ್ಥಿತರಿದ್ದರು.