ಅರಂತೋಡು: ಕೊಡೆಂಕಿರಿ – ಉದಯನಗರ ಬಂಡಡ್ಕ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

0

ಆರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡೆಂಕಿರಿ – ಉದಯನಗರ – ಬಂಡಡ್ಕ ರಸ್ತೆಯ ಕಾಂಕ್ರೀಟೀಕರಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾ.13ರಂದು ಗುದ್ದಲಿ ಪೂಜೆ ನೆರವೇರಿಸಿದರು.

ಆರಂತೋಡು ಗ್ರಾಮ ಪಂಚಾಯಿತ್ ಅಧ್ಯಕ್ಷ ಕೇಶವ ಆಡ್ತಲೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀಮತಿ ಮಾಲಿನಿ ವಿನೋದ್, ಪುಷ್ಪರಾಜ್ ಕೊಡೆಂಕಿರಿ, ವೆಂಕಟ್ರಮಣ ಪೆತ್ತಾಜೆ, ಆರಂತೋಡು -ತೊಡಿಕಾನ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ,
ನಿರ್ದೇಶಕರುಗಳಾದ ವಿನೋದ್ ಉಳುವಾರು, ಚಂದ್ರಶೇಖರ ಚೋಡಿ ಪಣೆ, ಗುತ್ತಿಗೆದಾರ ಚರಣ್ ಅಡ್ಕಬಳೆ ಬಿಜೆಪಿ ಬೂತ್ ಸಮಿತಿ ಸದಸ್ಯರುಗಳು , ರಸ್ತೆಯ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


ಆರಂತೋಡು -ತೊಡಿಕಾನ ಸಹಕಾರಿ ಸಂಘದ ನಿರ್ದೇಶಕ ಕುಸುಮಾಧರ ಅಡ್ಕಬಳೆ ವಂದಿಸಿದರು.