ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಕಾನತ್ತೂರ್ ಆಯ್ಕೆಯಾದರು.

ದೇಗುಲದ ಆಡಳಿತ ಅಧಿಕಾರಿ ಸುಳ್ಯ ತಹಶೀಲ್ದಾರ್ ಜಿ ಮಂಜುನಾಥರವರು ಅಧಿಕಾರ ಹಸ್ತಾಂತರಿಸಿದರು.

ನೂತನ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಸತ್ಯನಾರಾಯಣ ಭಟ್ ಕಾಯಂಬಾಡಿ, ರಾಮಚಂದ್ರ ಭಟ್ (ಅರ್ಚಕರು), ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಣ್ಣ ನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ ಕಾಚಿಲ ಮಾಯಿಲಪ್ಪ ಗೌಡ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಶ್ರೀಮತಿ ಮಾಲಿನಿ ಕುದ್ವ ರವರನ್ನು

ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಆಯುಕ್ತರು,ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಧಾಯ ಧತ್ತಿಗಳ ಇಲಾಖೆ ಬೆಂಗಳೂರು ಇವರು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.