ದುಗ್ಗಲಡ್ಕ ಶ್ರೀ ದುಗ್ಗಲಾಯ ನೇಮೋತ್ಸವದ ಪ್ರಯುಕ್ತ ಹಸಿರುವಾಣಿ ಮೆರವಣಿಗೆ

0

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ ಮಾ.19 ಮತ್ತು 20 ರಂದು ನಡೆಯಲಿದ್ದು, ಆ ಪ್ರಯುಕ್ತ ಹಸಿರುವಾಣಿ ಮೆರವಣಿಗೆ ಇಂದು ನಡೆಯಿತು.

ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ ಕೇಸರಿ ಧ್ವಜ ಹಾರಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಸಮಿತಿಯ ಅಧ್ಯಕ್ಷರಾದ ಸುಂದರ ರಾವ್, ಗೌರವಾಧ್ಯಕ್ಷ ದಯಾನಂದ ಸಾಲಿಯಾನ್, ಕಾರ್ಯದರ್ಶಿ ಕಜೆ ಕುಶಾಲಪ್ಪ ಗೌಡ , ಮಹಿಳಾ ವೇದಿಕೆಯ ಅಧ್ಯಕ್ಷೆ ಪ್ರಭಾವತಿ ರೈ, ನ.ಪಂ.ಸದಸ್ಯೆ ಶಶಿಕಲಾ ಎ.ನೀರಬಿದಿರೆ ಮತ್ತು ಪದಾಧಿಕಾರಿಗಳು, ಸದಸ್ಯರು, ಊರವರು ಭಾಗವಹಿಸಿದ್ದರು.ವಿಶೇಷ ಆಕರ್ಷಣೆಯಾಗಿ ಶ್ರೀ ರಾಮ ಕುಣಿತ ಭಜನಾ ತಂಡ ದೇಲಂಪಾಡಿ ಇವರಿಂದ ಕುಣಿತ ಭಜನೆ‌ ನಡೆಯಿತು.