ಬೆಟ್ಟಂಪಾಡಿ ಕೊರಗಜ್ಜ ದೈವದ ನೇಮೋತ್ಸವ-ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ

0

ದೈವಸ್ಥಾನ, ದೇವಾಲಯಗಳ ಜೀರ್ಣೋದ್ಧಾರ ಕಾರ್ಯ ನಡೆದು ಬದಲಾವಣೆಯ ಪರ್ವ ಆರಂಭಗೊಂಡಿದೆ,
ಧರ್ಮದ ತಿರುಳುಗಳು ಇರುವುದು ಸಿದ್ದಾಂತ ದಲ್ಲಲ್ಲ. ಅದು ಆಚರಣೆಯಲ್ಲಿದೆ :
ಲತಾ ಮಧುಸೂದನ್

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಕೊರಗಜ್ಜ ದೈವದ ನೇಮೋತ್ಸವದಂದು ಧಾರ್ಮಿಕ ಸಭೆಯು ಸ್ವಾಮಿ ಕೊರಗಜ್ಜ ದೈವಸ್ಥಾನ ಸಮಿತಿಯ ಅಧ್ಯಕ್ಷ ಚಿದಾನಂದ ವಿದ್ಯಾನಗರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷೆ ಶ್ರೀಮತಿ ಲತಾ ಮಧುಸೂದನ್, ಶ್ರೀಮತಿ ರಾಧಾಮೋಹನ ಮೊಗೇರ, ಕಾರ್ಯದರ್ಶಿ ರವೀಶ್ ಪಡ್ಡಂಬೈಲು, ಸಮಿತಿ ಉಪಾಧ್ಯಕ್ಷ ಕೆ.ಎಸ್.ಸುನೀಲ್ ಕುಮಾರ್, ಸಮಿತಿ ಖಜಾಂಜಿ‌ ಚಂದ್ರ ರಾವ್ ಬೆಟ್ಟಂಪಾಡಿ,ನಿರ್ದೇಶಕ ಜಗದೀಶ್ ಎಂ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊರಗಜ್ಜ ದೈವಸ್ಥಾನದ ನಿರ್ಮಾಣದ ಸಂದರ್ಭದಲ್ಲಿ ಹಾಗೂ ನೇಮೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ದಾನಿಗಳನ್ನು ಮತ್ತು ಸ್ವಯಂ ಸೇವಕರನ್ನು ಜಂಟಿ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಸಮಿತಿನಿರ್ದೇಶಕ ಅನೂಪ್‌ಕಮಲಾಕ್ಷ ಪೈ ಸ್ವಾಗತಿಸಿದರು. ಕಾರ್ಯದರ್ಶಿ ರವೀಶ್ ಪಡ್ಡಂಬೈಲು ವಂದಿಸಿದರು. ನಿರ್ದೇಶಕ ಗಿರೀಶ್ ಕುಂಟಿನಿ ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕಲಾವಿದ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ಪ್ರದರ್ಶನವಾಯಿತು.