ಸುಳ್ಯ ಕಲ್ಕುಡ ದೈವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

0

ಸುಳ್ಯದ ಕಾರಣಿಕ ಕ್ಷೇತ್ರ ಕಲ್ಕುಡ ದೈವಸ್ಥಾನಕ್ಕೆ ದ.ಕ ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಧರ್ಮದರ್ಶಿ ಪಿ.ಕೆ ಉಮೇಶ್ ರವರು ಪ್ರಸಾದ ನೀಡುವ ಮೂಲಕ ಶುಭಾಶಯ ಕೋರಿದರು.


ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ ಮನ್ಮಥ,ಚುನಾವಣಾ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ,
ವಿನಯ ಕುಮಾರ್ ಕಂದಡ್ಕ ಹಾಗೂ ದೈವಸ್ಥಾನದ ಧರ್ಮದರ್ಶಿ ಮಂಡಳಿಯ ಸದಸ್ಯರು, ಪಕ್ಷದ ವಿವಿಧ ಜವಬ್ದಾರಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ದೈವಸ್ಥಾನದ ಪೂಜಾರಿ ತಿಮ್ಮಪ್ಪ ಗೌಡ ರವರು ಪ್ರಾರ್ಥಿನೆ ನೆರವೇರಿಸಿದರು.