ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ, ಮಠ ಭೇಟಿ

0
  • ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮಾ.20 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ಮಾಡಿ ದೇವರ ದರ್ಶನ ಪಡೆದರು.

ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು, ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳ ಆರ್ಶಿವಾದ ಪಡೆದರು. ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ, ಮುಖಂಡರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎಸ್ ಎನ್ ಮನ್ಮಥ, ಚಂದ್ರಾ ಕೋಲ್ಚಾರ್, ರಾಜೇಶ್ ಕಿರಿಭಾಗ, ಸುಜಾತ ಕಲ್ಲಾಜೆ, ದುರ್ಗೇಶ್ ಪಾರೆಪ್ಪಾಡಿ, ವಿನಯ ಕಂದಡ್ಕ, ಶ್ರೀ ಕುಮಾರ್, ದಿನೇಶ್ ಸಂಪ್ಯಾಡಿ, ಮನುದೇವ ಪರಮಲೆ, ರಾಜೇಶ್ ಎನ್.ಎಸ್, ಮತ್ತಿತರರು ಉಪಸ್ಥಿತರಿದ್ದರು