ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ನ.ಸೀತಾರಾಮರ ಮನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

0

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಜಾಲ್ಸೂರಿನ ನ.ಸೀತಾರಾಮ ಅವರ ಮನೆಗೆ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾ.20ರಂದು ರಾತ್ರಿ ಭೇಟಿ ನೀಡಿ, ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿಯ ಅಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಭಾರಿ ಅಪ್ಪಯ್ಯ ಮಣಿಯಾಣಿ, ಸುಳ್ಯ ಕ್ಷೇತ್ರದ ಚುನಾವಣಾ ಸಂಚಾಲಕ ಹರೀಶ್ ಕಂಜಿಪಿಲಿ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.