ಪಂಜ ದೇವಳಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಭೇಟಿ

0

ಕರ್ನಾಟಕ ಸರ್ಕಾರದಿಂದ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕವಾಗಿರುವ ಲಕ್ಷ್ಮೀಶ ಗಬ್ಲಡ್ಕ ರವರು ಮಾ.20 ರಂದು ಪಂಜ ಸೀಮೆ ದೇವಸ್ಥಾನ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು .
ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ದೇವಿ ಪ್ರಸಾದ್ ಕಾನತ್ತೂರ್, ಪ್ರಧಾನ ಅರ್ಚಕ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಪಾಲ ಗೌಡ ಮರಕಡ ಕಾಚಿಲ, ಸಂತೋಷ್ ಕುಮಾರ್ ರೈ ಬಳ್ಪ,ಶ್ರೀ ಧರ್ಮಣ್ಣ ನಾಯ್ಕ ಗರಡಿ,ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಶ್ರೀಮತಿ ಮಾಲಿನಿ ಕುದ್ವ, ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರಜಿತ್ ಭಟ್ ಪಂಜ ಬೀಡು ಉಪಸ್ಥಿತರಿದ್ದರು.