ನಿನ್ನೆ ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಘೋಷಣೆ

0

ದ.ಕ.ಕ್ಷೇತ್ರದಿಂದ ಪದ್ಮರಾಜ್ ಆರ್. ಅಭ್ಯರ್ಥಿ

ಉಡುಪಿ : ಜಯಪ್ರಕಾಶ್ ಹೆಗ್ಡೆ, ಮೈಸೂರು ಕೊಡಗು ಕ್ಷೇತ್ರದಿಂದ ಎಂ.ಲಕ್ಷ್ಮಣ್

ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯದಿಂದ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ನಿನ್ನೆ ರಾತ್ರಿ ಬಿಡುಗಡೆ ಮಾಡಿದ್ದು, ದ.ಕ. ಲೋಕಸಭಾ ಕ್ಷೇತ್ರದಿಂದ ನಿರೀಕ್ಷೆಯಂತೆ ಪದ್ಮರಾಜ್ ಆರ್. ಅಭ್ಯರ್ಥಿಯಾಗಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜಯಪ್ರಕಾಶ್ ಹೆಗ್ಡೆ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಎಂ.ಲಕ್ಷ್ಮಣ್ ಅಭ್ಯರ್ಥಿಗಳಾಗಿದ್ದಾರೆ.

ಪದ್ಮರಾಜ್ ಆರ್. ರವರು ಮಂಗಳೂರಿನಲ್ಲಿ ನ್ಯಾಯವಾದಿಯಾಗಿದ್ದು, ಶ್ರೀ ಕ್ಷೇತ್ರ ಕುದ್ರೋಳಿಯ ಖಜಾಂಚಿಯಾಗಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ಆಪ್ತರಾಗಿರುವ ಇವರು ಯುವವಾಹಿನಿ ಹಾಗೂ ಗುರು ಬೆಳದಿಂಗಳು ಟ್ರಸ್ಟ್ ಮೂಲಕ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದವರು.