ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ ಎಲ್ ಎ ಹಾಗೂ ಬೂತ್ ಅಧ್ಯಕ್ಷರುಗಳಿಗೆ ತರಬೇತಿ ಕಾರ್ಯಾಗಾರ

0

ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ನ ಬಿ ಎಲ್ ಎ ಗಳಿಗೆ ಹೊಸ ಮತದಾರರ ಪಟ್ಟಿಯ ಸೇರ್ಪಡೆ ಹಾಗೂ ತಿದ್ದುಪಡಿ ಯ ತರಬೇತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳಿಗೆ ಪಕ್ಷ ಸಂಘಟನೆಯ ತರಬೇತಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರ ನಿರ್ದೇಶನದಂತೆ ಹಾಗೂ ಬಿ ಎಲ್ ಎ ಸಮಿತಿ ಜಿಲ್ಲಾಧ್ಯಕ್ಷರಾದ ಭರತ್ ಮುಂಡೋಡಿಯವರ ಉಪಸ್ಥಿತಿಯಲ್ಲಿ ನಡೆಯಿತು.

ಕಾರ್ಯಾಗಾರವನ್ನು ಮಹಮ್ಮದ್ ಬಡಗನ್ನೂರು ರವರು ನಡೆಸಿಕೊಟ್ಟರು.‌ ಈ ಸಂದರ್ಭದಲ್ಲಿ 95 ಕ್ಕೂ ಹೆಚ್ಚಿನ ಬೂತಿನ ಬಿ ಎಲ್ ಎ ಗಳು ಹಾಗೂ ಬೂತ್ ಸಮಿತಿ ಅಧ್ಯಕ್ಷರುಗಳು ಹಾಜರಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಗಳಾದ,ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಮಮತಾ ಗಟ್ಟಿಯವರಿಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಭರತ್ ಮುಂಡೋಡಿಯವರಿಗೆ ಹಾಗೂ ಕಡಬ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರುಗಳಾದ ಸುಧೀರ್ ಕುಮಾರ್ ಶೆಟ್ಟಿ ಯವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಎಲ್ಲಾ ಘಟಕದ ಅಧಕ್ಷರುಗಳು ಹಾಗೂ ಪದಾಧಿಕಾರಿಗಳ ಸಮ್ಮುಖದ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಿಸಾನ್ ಘಟಕದ ಅಧಕ್ಷರಾದ ಭವಾನಿಶಂಕರ್ ಗೌಡ, ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ ಗೇರು ಬೀಜದ ಮಾಲೆಯಲ್ಲಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿಗಳಾದ ಗೇರು ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ,ಕೆಪಿಸಿಸಿ ಸಂಯೋಜಕ ಹಾಗೂ ಸುಳ್ಯ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಜಿ ಕೃಷ್ಣಪ್ಪ ,ಕೆಪಿಸಿಸಿ ಸದಸ್ಯರಾದ ಸತೀಶ್ ಕೆಡೆಂಜಿ,,ಡಿಸಿಸಿ ಉಪಾಧ್ಯಕ್ಷರಾದ ವಿಜಯ್ ಕುಮಾರ್ ರೈ ,ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸೈಮನ್ , ಡಿಸಿಸಿ ಪದಾಧಿಕಾರಿಗಳಾದ ವಿಜಯ್ ಕುಮಾರ್ ಸೊರಕೆ, ಮಾಜಿ ಅಧ್ಯಕ್ಷರಾದ ಶೀನಪ್ಪ ,ಮಾಜಿ ಕೆಪಿಸಿಸಿ ಸದಸ್ಯರಾದ ಕೆ ಪಿ ತೋಮಸ್ಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹಾಗೂ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪಿ ಪಿ ವರ್ಗೀಸ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸರ್ವೋತ್ತಮ ಗೌಡ ,ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಆದಂ,,ಡಿಸಿಸಿ ಸದಸ್ಯರುಗಳಾದ ಬಾಳಕೃಷ್ಣ ಬಳ್ಳೇರಿ, ಉಷಾ ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾದ ಪೈಜಲ್, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಯಾದ ಸತೀಶ್ ನಾಯಕ್ ಮೇಲಿನಮನೆ, ಕಡಬ ಬ್ಲಾಕ್ ನ ಪ್ರಚಾರ ಸಮಿತಿ ಅಧ್ಯಕ್ಷರುಗಳಾದ ರಾಯ್ ಅಬ್ರಹಾಂ, ಸಂಘಟನಾ ಕಾರ್ಯದರ್ಶಿ ಶಿವರಾಮ್ ರೈ,ಯುವ ಕಾಂಗ್ರೆಸ್ ಸಮಿತಿ ಯ ಅಧಕ್ಷರಾದ ಅಭಿಲಾಷ್ ಪಿ ಕೆ,ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾರದ ದಿನೇಶ್ ಬಿಳಿನೆಲೆ,ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷರುಗಳಾದ ಅಶ್ರಪ್ ಶೇಡಿಗುಂಡಿ,ಕಿಸಾನ್ ಘಟಕದ ಅಧಕ್ಷರಾದ ಭವಾನಿಶಂಕರ್ ಗೌಡ,ಕಾರ್ಮಿಕ ಘಟಕದ ಅಧಕ್ಷರಾದ ಮ್ಯಾಥ್ಯು,ಓಬಿಸಿ ಘಟಕದ ಪೂವಪ್ಪ ಕರ್ಕೇರ,ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ಮೇಲುಸ್ಥುವಾರಿ ಸಮಿತಿ ಸದಸ್ಯರಾದ ಲೋಲಾಕ್ಷ,ಸತೀಶ್ ಕೂಜುಗೋಡು, ಪವನ್ ಸುಬ್ರಹ್ಮಣ್ಯ ಮಾಜಿ ತಾಲೂಕು ಪಂಚಾಯಿತಿ ಸದಸ್ಯರುಗಳು ಬ್ಲಾಕ್ ಕಾಂಗ್ರೆಸ್ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಮಹಿಳಾ ಕಾಂಗ್ರೆಸ್ ಪಧಾದಿಕಾರಿಗಳು ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು,ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳು, ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಹಾಗು ಸದಸ್ಯರುಗಳು,ಗ್ರಾಮ ಸಮಿತಿ ಅಧ್ಯಕ್ಷರುಗಳು, ಬೂತ್ ಸಮಿತಿ ಅಧ್ಯಕ್ಷರುಗಳು ಹಾಜರಿದ್ದರು. ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ ಯವರು ವಹಿಸಿದರು ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ನಾಯಕ್ ಮೇಲಿನಮನೆಯವರು ಕಾರ್ಯಕ್ರಮ ನಿರ್ವಹಣೆ ಮಾಹಿದರು ಪಿ ಪಿ ವರ್ಗೀಸ್ ರವರು ಧನ್ಯವಾದ ಸಲ್ಲಿಸಿದರು ಉಷಾ ಅಂಚನ್ ರವರು ಕಾರ್ಯಕ್ರಮ ನಿರೂಪಿಸಿದರು