ಮುರೂರು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಾಖಲೆಯಿಲ್ಲದ ಹಣ ವಶ

0

ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಮುರೂರಿನಲ್ಲಿರುವ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಲಾಗುತಿದ್ದು, ಹಾಸನಕ್ಕೆ ಹೋಗುತಿದ್ದ ಲಾರಿಯಲ್ಲಿ ದಾಖಲೆಯಿಲ್ಲದೆ ಸಾಗಾಟ‌ ಮಾಡಲಾಗುತಿದ್ದ ಹಣವನ್ನು ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಕಾಸರಗೋಡಿನಿಂದ ಹಾಸನಕ್ಕೆ ತೆರಳುವ ಲಾರಿಯನ್ನು ಚುನಾವಣಾ ಕರ್ತವ್ಯ ನಿರತ ಅಧಿಕಾರಿ‌ ಜಯಪ್ರಸಾದ್ ಕಾರಿಂಜ ಹಾಗೂ ಸಿಬ್ಬಂದಿಗಳು ತಪಾಸಣೆ ನಡೆಸಿದಾಗ, ದಾಖಲೆ ಇಲ್ಲದ ರೂ.84 ಸಾವಿರದ 400 ಪತ್ತೆಯಾಯಿತು. ಇದನ್ನು ವಶಪಡಿಸಿಕೊಳ್ಳಲಾಗಿದೆ.

ಬಳಿಕ ಚುನಾವಣಾಧಿಕಾರಿಗಳು ಸ್ಥಳಕ್ಕೆ ಬಂದು ಮಹಜರು ನಡೆಸಿದರೆಂದು ತಿಳಿದುಬಂದಿದೆ.