ಮಾ.‌ 30ರಿಂದ ಏ. 4: ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವ

0

ಪೂರ್ವಭಾವಿ ಸಭೆ, ಮಾ. 27 ಆಮಂತ್ರಣ ಪತ್ರ ಅಭಿಯಾನ

ಬಳ್ಪ ಗ್ರಾಮದ ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ ಕಲಶೋತ್ಸವವು ಮಾ. 30ರಿಂದ ಏ. 4ರ ತನಕ ನಡೆಯಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯು ಮಾ. 24ರಂದು ನಡೆಯಿತು.
ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿಗಳ ಪದಾರ್ಥಗಳನ್ನು, ಸದಸ್ಯರು, ಭಕ್ತಾದಿಗಳು ಸಭೆಯಲ್ಲಿ ಪಾಲ್ಗೊಂಡು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಮಾ. 27ರಂದು ಆಮಂತ್ರಣ ಪತ್ರ ಅಭಿಯಾನ ನಡೆಯಲಿದ್ದು, ಸುಳ್ಯ, ಕಡಬ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಆಮಂತ್ರಣ ಪತ್ರ ಹಂಚಲಿದ್ದಾರೆ.