ಪಂಜ ಶ್ರೀ‌ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರ ಆಯ್ಕೆ

0

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರಾಗಿ ಮಹೇಶ್ ಕುಮಾರ್ ಕರಿಕಳ, ಆನಂದ ಗೌಡ ಕಂಬಳ, ಉದಯಕುಮಾರ್ ಬೆಟ್ಟ, ಪರಮೇಶ್ವರ ಬಿಳಿಮಲೆ, ಉಮೇಶ್ ಬುಡೆಂಗಿ ಬಳ್ಪ ರವರನ್ನು ಮಾ.25 ರಂದು ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಡಾ.ದೇವಿಪ್ರಸಾದ್ ಕಾನತ್ತೂರ್ ವಹಿಸಿದ್ದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ರಾಮಚಂದ್ರ ಭಟ್, ಸಂತೋಷ್ ಕುಮಾರ್ ರೈ ಬಳ್ಪ, ಧರ್ಮಪಾಲ ಗೌಡ ಮರಕಡ ಕಾಚಿಲ, ಧರ್ಮಣ್ಣ ನಾಯ್ಕ ಗರಡಿ, ಮಾಯಿಲಪ್ಪ ಗೌಡ ಪಟ್ಟೆ ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೇಟ್ಟಿ , ಶ್ರೀಮತಿ ಮಾಲಿನಿ ಕುದ್ವ ಉಪಸ್ಥಿತರಿದ್ದರು.