ಅರಂಬೂರು: ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.75,000 ಅನುದಾನ ಮಂಜೂರಾತಿ

0

ಅರಂಬೂರು ದ.ಕ. ಜಿ.ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರದ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 75000 ಸಾವಿರದ ಅನುದಾನ ಮಂಜೂರಾತಿ ಆದೇಶ ಪತ್ರ ವಿತರಣೆ.

ಅರಂಬೂರು ದ.ಕ. ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತವಾಗಿ ಶಾಲೆಯ ರಂಗಮಂದಿರ ರಚನೆಯ ಕಾಮಗಾರಿಯನ್ನು ಕೈಗೊಂಡಿದ್ದು ಈ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾಕ್ಟರ್ ಡಿ ವೀರೇಂದ್ರ ಹೆಗಡೆಯವರು 75000 ಅನುದಾನವನ್ನು ಮಂಜೂರು ಮಾಡಿರುತ್ತಾರೆ.

ಇದರ ಮಂಜೂರಾತಿ ಆದೇಶ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ನಾಗೇಶ್ ಪಿ ರವರು ಶಾಲಾ ಅಭಿವೃದ್ಧಿ ಸಮಿತಿಯವರಿಗೆ ಹಸ್ತಾಂತರಿಸಿದರು .

ಈ ಸಂದರ್ಭದಲ್ಲಿ ಸುಳ್ಯ ವಲಯದ ಮೇಲ್ವಿಚಾರಕರಾದ ಪ್ರಿಯ ಪರಿವಾರಕಾನ ಒಕ್ಕೂಟದ ಅಧ್ಯಕ್ಷರಾದ ಬಾಲಚಂದ್ರ ಹಲ್ ಧಡ್ಕ ಅರಂಬೂರು ಒಕ್ಕೂಟದ ಅಧ್ಯಕ್ಷರಾದ ಚಂದ್ರಶೇಖರ ಮತ್ತು ಸೇವಾ ಪ್ರತಿನಿಧಿಯಾದ ಸುರೇಶ್ ಪರಿವಾರ ಕಾನ ರವರು ಉಪಸ್ಥಿತರಿದ್ದರು.