ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರ ಚುನಾವಣಾ ಕಚೇರಿ ಉದ್ಘಾಟನೆ

0

ಮಂಗಳೂರು ಲೋಕಸಭಾ ‌ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ರವರ ಚುನಾವಣಾ ಕಚೇರಿ ಮಂಗಳೂರಿನ ಲಾಲ್ ಭಾಗ್ ನ ಮುದ್ರಾ ಹೌಸ್ ನಲ್ಲಿ ಇಂದು ಉದ್ಘಾಟನೆ ಗೊಂಡಿತು. ಕಾರ್ಯಕ್ರಮದಲ್ಲಿ ಸುಳ್ಯದಿಂದ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಕಚೇರಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯದಿಂದ ಜಿಲ್ಲಾ ಕಾಂಗ್ರೆಸ್ ಉಪಧ್ಯಕ್ಷ ಎನ್.ಜಯಪ್ರಕಾಶ್ ರೈ, ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಹಾಗೂ ಡಿಸಿಸಿ ಸದಸ್ಯೆ ಶ್ರೀಮತಿ ಲೀಲಾ ಮನಮೋಹನ್ , ಪಂಚಾಯತ ರಾಜ್ ಸಂಘಟನೆ ಯ ಸುಳ್ಯ ತಾಲೂಕು ಅಧ್ಯಕ್ಷ ಜಯಪ್ರಕಾಶ್ ನೆಕ್ರೆಪ್ಪಾಡಿ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಜಿಲ್ಲಾ ಕಾಂಗ್ರೆಸ್ ಸಮಿತಿ ಯ ಸದಸ್ಯರಾದ ಶ್ರೀಮತಿ ತಿರುಮಲೇಶ್ವರಿ ಅರ್ಬಡ್ಕ ಮೊದಲಾದವರಜ ಉಪಸ್ಥಿತರಿದ್ದರು