ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಜಾತ್ರೋತ್ಸವ : ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವವು ಮಾ.26ರಂದು ಪ್ರಾರಂಭಗೊಂಡಿದ್ದು, ಇಂದು ಬೆಳಿಗ್ಗೆ ದೇವರ ದರ್ಶನ ಬಲಿ ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ನಡೆಯಿತು.

ರಾತ್ರಿ ತುಳು ಕೋಲದ ಬೆಳ್ಳಾಟ ಎರಡು, ಬೇಟೆ ಕರಿಮಗನ್ ಈಶ್ವರನ್ ಬೆಳ್ಳಾಟ, ತುಳುಕೋಲ ತಿರುವಪ್ಪಗಳು ಎರಡು ನಡೆಯಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಜಿತೇಂದ್ರ ನಿಡ್ಯಮಲೆ, ಕಾರ್ಯದರ್ಶಿ ತೇಜಪ್ರಸಾದ್ ಅಮಚೂರು, ದೇವತಕ್ಕ ರಾಜಗೋಪಾಲ ರಾಮಕಜೆ, ಸೇರಿದಂತೆ ತಕ್ಕಮುಖ್ಯಸ್ಥರುಗಳು ಹಾಗೂ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.